
ಮಂಗಳೂರು: ವಿದ್ಯಾರ್ಥಿನಿ ರೇಷ್ಮಾ ಅವರು ಇನ್ಸ್ಟಾಗ್ರಾಂನಲ್ಲಿ ಹಾಕಿದ ಆಪರೇಷನ್ ಸಿಂದೂರ್ ಕುರಿತ ಪೋಸ್ಟ್ ವೈರಲ್ ಆಗಿದೆ. ಪೋಸ್ಟ್ನಲ್ಲಿ ಬಳಸಿದ ಭಾಷೆ ಮತ್ತು ಹ್ಯಾಶ್ಟ್ಯಾಗ್ಗಳು ವಿವಾದಕ್ಕೆ ಕಾರಣವಾಗಿವೆ. ಪೋಸ್ಟ್ಗೆ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ರೇಷ್ಮಾ ತಮ್ಮ ಪೋಸ್ಟ್ಗೆ ಸಮರ್ಥನೆ ನೀಡಿದ್ದಾರೆ ಮತ್ತು ದೇಶಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಇವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಾರ್ವಜನಿಕರು ಮತ್ತು ನೆಟ್ಟಿಗರು ಒತ್ತಾಯಿಸಿದ್ದಾರೆ.

j3tvkannada
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್ ಭಾರೀ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್ ದಿಕ್ಕಾರ ಆಪರೇಷನ್ ಸಿಂದೂರ್ ಎಂದು ಗುರುವಾರ (ಮೇ 08) ದಂದು ಪೋಸ್ಟ್ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ.
ರೇಷ್ಮಾ ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸ್ನಾತಕ್ಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕು ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ… ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದು ಕತ್ತಲು… ಎಲ್ಲೆಲ್ಲೂ ಕತ್ತಲು…!”#dikkaraoperationsindura ಹ್ಯಾಷ್ ಟ್ಯಾಗ್ ನಡಿ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ.
ತನ್ನ ಪೋಸ್ಟ್ಗೆ ಸಮರ್ಥನೆ ನೀಡಿದ ರೇಷ್ಮಾ:- ಪೋಸ್ಟ್ ವೈರಲ್ ಆದ ಬೆನ್ನಲ್ಲೇ ರೇಷ್ಮಾ ತನ್ನನ್ನು ತಾನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಭಾರತ ದೇಶದ ಮೇಲೆ ಅಪಾರ ಪ್ರೀತಿ ಇದೆ, ಗೌರವ ನನಗಿದೆ. ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯು ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಯಿಂದ ಬದುಕಬೇಕು ಎಂಬುದು ನನ್ನ ಕಾಳಜಿ. ಈ ದೇಶದಲ್ಲಿ ಹುಟ್ಟಿರುವ ಬಗ್ಗೆ ಹೆಮ್ಮೆ ಇದೆ, ಏಕೆಂದರೆ ವೈವಿಧ್ಯತೆಯಲ್ಲಿ ಏಕತೆ ಇರುವ ದೇಶ ಭಾರತ. ಈ ದೇಶದ ಮಣ್ಣಿನ ಮಕ್ಕಳಾದ ನಾವು ದ್ವೇಷದ ಕಾರಣ, ಭಯೋತ್ಪಾದನೆಯ ಕಾರಣಕ್ಕಾಗಿ ಮಣ್ಣಾಗುವುದು, ನೋವುಗಳನ್ನು ಅನುಭವಿಸುವುದು ನನಗಿಷ್ಟವಿಲ್ಲ ಎಂದು ಹೇಳಿದ್ದಾಳೆ.