
ಬೀದರ್: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಭಾರತ ನಡೆಸುತ್ತಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತೀಯ ಯೋಧರಿಗೆ ಶಕ್ತಿ ತುಂಬಲು ಇಂದು ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.

j3tvkannada.in
ಗಡಿ ಜಿಲ್ಲೆ ಬೀದರ್ನಲ್ಲಿ ವಕ್ಫ್ಗೆ ಸೇರಿದ ಹಾಗೂ ಇತರೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಜಾಮಿಯಾ, ಅಬ್ಧುಲ್ ಫೈಜಾ ಮಸೀದಿ ಸೇರಿದಂತೆ ಎಲ್ಲಾ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಬೀದರ್ನ ಚಿದ್ರಿ, ಓಲ್ಡ್ ಸಿಟಿ, ನ್ಯೂ ಬಸ್ ನಿಲ್ದಾಣ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಈ ಮೂಲಕ ಶಾಂತಿಯ ಸಂದೇಶ ನೀಡುತ್ತಿರುವ ಭಾರತೀಯ ವೀರ ಯೋಧರಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆಪರೇಷನ್ ಸಿಂಧೂರ ಮೂಲಕ ಭಾರತೀಯ ಯೋಧರು ತಮ್ಮ ತಾಕತ್ತು ತೋರಿಸಿದ್ದು, ಭಾರತ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ.
ಶುಕ್ರವಾರದ ಸಾಮೂಹಿಕ ನಮಾಜ್ನಲ್ಲಿಅಲ್ಲಾಹನು ವೀರ ಯೋಧರಿಗೆ ಹೋರಾಡಲು ಶಕ್ತಿ ನೀಡಿಲಿ ಎಂದು ಮಸೀದಿಯಲ್ಲಿ ಮೌಲ್ವಿ ಪ್ರಾರ್ಥನೆ ಮಾಡಿದ್ದಾರೆ. ಇನ್ನು ದೇಶದ ಸೈನ್ಯ ಮತ್ತು ಸೈನಿಕರ ಆರೋಗ್ಯಕ್ಕೆ ಕೊಲಾರದ ಹಲವು ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಿ ಮುಸ್ಲಿಂ ಸಮುದಾಯದವರು ಶುಭ ಹಾರೈಸಿದರು.