
ಚಿಕ್ಕಬಳ್ಳಾಪುರ: ಡೈವರ್ಸ್ ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ವಂಚಿಸುತ್ತಿದ್ದ ಸುರೇಶ್ ನಾಯ್ಡು ಎಂಬಾತನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮರುಮದುವೆಗೆ ನೋಂದಾಯಿಸಿಕೊಂಡು ಮಹಿಳೆಯರಿಂದ ಹಣ ಪಡೆದು ವಂಚಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಒಬ್ಬ ಮಹಿಳೆಯಿಂದ 2.80 ಲಕ್ಷ ರೂಪಾಯಿ ಪಡೆದಿರುವುದು ದೃಢಪಟ್ಟಿದೆ. ಆರೋಪಿ ತನ್ನ ಆರ್ಥಿಕ ಸಂಕಷ್ಟದಿಂದಾಗಿ ಈ ಕೃತ್ಯ ಎಸಗಿದ್ದಾನೆ ಎಂದು ಒಪ್ಪಿಕೊಂಡಿದ್ದಾನೆ.

j3tvkannada
ಆರೋಪಿ ಸುರೇಶ್ ನಾಯ್ಡು ಡೈವರ್ಸ್ ಮ್ಯಾಟ್ರಿಮೋನಿ ಸೈಟ್ನಲ್ಲಿ ಮರು ಮದುವೆಗೆ ನೊಂದಣಿ ಮಾಡಿಕೊಂಡಿದ್ದ, ಮಹಿಳೆಯರಿಗೆ ತಮ್ಮ ಮದುವೆಯಾಗುವುದಾಗಿ ನಂಬಿಸುತ್ತಿದ್ದನು. ಬಳಿಕ ಮಹಿಳೆಯರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದನು. ಇದ ರೀತಿ ಚಿಕ್ಕಬಳ್ಳಾಪುರದ ಲೇಡಿ ನರ್ಸಿಂಗ್ ಆಪೀಸರ್ ಒಬ್ಬರನ್ನು ಮದುವೆ ಮಾಡೊಕೊಳ್ಳುವುದಾಗಿ ನಂಬಿಸಿ ಅವರಿಂದ 2.80 ಲಕ್ಷ ರೂ. ಪಡೆದು ಬ್ಲಾಕ್ ಮೆಲ್ ಮಾಡಿ ಬೆದರಿಕೆ ಹಾಕಿದ್ದಾನೆ.
ನಂತರ, ಮಹಿಳೆ ಚಿಕ್ಕಬಳ್ಳಾಪುರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಸುರೇಶ ನಾಯ್ಡು ಅನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ, ಬೆಂಗಳೂರಿನ ಯಶವಂತಪುರದಲ್ಲಿ ಓರ್ವ ಮಹಿಳೆ, ಮಲೇಷ್ಯಾದಲ್ಲಿ ಓರ್ವ ಮಹಿಳೆ, ಚಿಕ್ಕಬಳ್ಳಾಪುರದಲ್ಲಿ ಸೇರಿದಂತೆ ಕೆಲವು ಮಹಿಳೆಯರಿಗೆ ವಂಚನೆ ಮಾಡಿರುವುದು ಬಯಲಾಗಿದೆ.
ಸುರೇಶ ನಾಯ್ಡು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತನ್ನ ತಂದೆ ಮೃತಪಟ್ಟ ನಂತರ ಆರ್ಥಿಕ ಸಂಕಷ್ಟವಾಗಿ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದು, ಸಾಲದ ಹಣ ತೀರಿಸಲು ಮಹಿಳೆಯರಿಗೆ ವಂಚನೆ ಮಾಡುತ್ತಿದ್ದಾಗಿ ಬಾಯಿ ಬಿಟ್ಟಿದ್ದಾನೆ. ಮಾಡಿದ ತಪ್ಪಿಗೆ ಸುರೇಶ ನಾಯ್ಡು ಈಗ ಪೊಲೀಸರ ಅತಿಥಿಯಾಗಿದ್ದು, ನೊಂದ ಮಹಿಳೆಯರಿಗೆ ಬಾಳು ಕೊಡುವ ನೆಪದಲ್ಲಿ ವಂಚನೆ ಮಾಡಿರುವುದು ಬಯಲಾಗಿದೆ.