
ಯಾದಗಿರಿ: ದೇಶದಲ್ಲಿ ಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆಯ ವದಂತಿಗಳನ್ನು ಸಚಿವ ಪ್ರಹ್ಲಾದ್ ಜೋಶಿ ತಳ್ಳಿಹಾಕಿದ್ದಾರೆ. ಸಾಕಷ್ಟು ದಾಸ್ತಾನು ಲಭ್ಯವಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಅಕ್ಕಿ, ಗೋಧಿ, ಬೇಳೆಕಾಳುಗಳು ಮತ್ತು ಖಾದ್ಯ ತೈಲಗಳು ಸೇರಿದಂತೆ ಅಗತ್ಯ ವಸ್ತುಗಳು ಹೇರಳವಾಗಿವೆ. ತರಾತುರಿಯಲ್ಲಿ ಖರೀದಿಸದಂತೆ ಸಚಿವರು ಜನರಲ್ಲಿ ಮನವಿ ಮಾಡಿದ್ದಾರೆ.

j3tvkannada
ದೇಶದಲ್ಲಿಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ ಎಂಬುದು ಶುದ್ಧ ಸುಳ್ಳು. ಯಾರೊಬ್ಬರೂ ಈ ಹುಸಿ ವದಂತಿಗೆ ಕಿವಿಗೊಡಬಾರದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಮಾಹಿತಿ ನೀಡಿರುವ ಅವರು, ದೇಶದ ವಿವಿಧೆಡೆ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿದೆ ಎಂದು ಕೆಲವರು ಸುಳ್ಳು ವದಂತಿ ಹರಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕಿಡಿಗೇಡಿಗಳ ಪ್ರಯತ್ನವಿದು ಎಂದು ಸ್ಪಷ್ಟಪಡಿಸಿದರು.
ಪಂಜಾಬ್ನಲ್ಲಿ ಇಂಥ ಸುಳ್ಳು ವದಂತಿ ಹಬ್ಬಿಸಲಾಗಿದೆ. ಆದರೆ, ದೇಶದ ಯಾವುದೇ ಸ್ಥಳದಲ್ಲೂಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿಲ್ಲ. ಅಗತ್ಯಕ್ಕಿಂತ ಹೆಚ್ಚೇ ದಾಸ್ತಾನಿದೆ. ಜನರು ಅಗತ್ಯ ಆಹಾರ ಧಾನ್ಯ ಮತ್ತು ದೈನಂದಿನ ಅಗತ್ಯ ವಸ್ತುಗಳಿಗೆ ಎಲ್ಲೂ ಮುಗಿಬೀಳಬೇಕಿಲ್ಲಎಂದು ಹೇಳಿದರು.

j3tvkannada
ದೇಶಾದ್ಯಂತ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಸಂಗ್ರಹಣೆ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿದೆ. ಎಲ್ಲೆಡೆಯೂ ಅಗತ್ಯಕ್ಕಿಂತ ದೊಡ್ಡ ಮಟ್ಟದಲ್ಲೇ ಆಹಾರ ಧಾನ್ಯ ಮತ್ತು ಅಗತ್ಯ ಸಾಮಗ್ರಿ ಸರಂಜಾಮು ಇರುವುದು ದೃಢಪಟ್ಟಿದೆ. ದೇಶದಲ್ಲಿ ಸಾಕಷ್ಟು ಸಂಗ್ರಹವಿದೆ. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಜೋಶಿ ತಿಳಿಸಿದರು.
ದೇಶದಲ್ಲಿಅಕ್ಕಿ, ಗೋಧಿ, ಕಡಲೆ, ತೊಗರಿ, ಮಸೂರ್, ಹೆಸರುಕಾಳು ಹೀಗೆ ಎಲ್ಲಾ ಆಹಾರ ಧಾನ್ಯಗಳು, ಬೇಳೆ-ಕಾಳುಗಳು ಅಗತ್ಯಕ್ಕಿಂತ ದುಪ್ಪಟ್ಟು, ದೊಡ್ಡ ಪ್ರಮಾಣದಲ್ಲೇ ಸಂಗ್ರಹವಿದೆ. ಆಹಾರ ಪದಾರ್ಥ ಮತ್ತು ಇತರ ಅಗತ್ಯ ವಸ್ತುಗಳ ಕೊರತೆಯಿದೆ ಎಂಬ ವದಂತಿ ನಿರಾಧಾರವಾಗಿದ್ದು, ಯಾರೂ ಇದನ್ನು ನಂಬಬಾರದು. ಜನತೆ ಯಾವುದೇ ರೀತಿಯಲ್ಲೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಸುಳ್ಳು ವದಂತಿಗೆ ಕಿವಿಗೊಟ್ಟು ಯಾರೊಬ್ಬರೂ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಖರೀದಿಗೆ ತರಾತುರಿ ತೋರಬಾರದು. ಬೇರೆ ಬೇರೆ ಮಾರುಕಟ್ಟೆಗಳಿಗೆ ತೆರಳಿ ದುಪ್ಪಟ್ಟು ಹಣ ತೆತ್ತು ಖರೀದಿಯಲ್ಲಿ ತೊಡಗಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.