
ಉತ್ತರ ಕನ್ನಡ: ಪಹಲ್ಗಾಮ್ ದಾಳಿ ಸೇಡನ್ನು ಭಾರತ ‘ಆಪರೇಷನ್ ಸಿಂಧೂರ್’ ಮೂಲಕ ತೀರಿಸಿಕೊಂಡಿದೆ. ಆದರೆ ಇನ್ನೂ ಬುದ್ಧಿ ಕಲಿಯದ ಪಾಕಿಸ್ತಾನ ಗುರುವಾರ ರಾತ್ರಿ, ಜಮ್ಮು, ಪಂಜಾಬ್ ಮತ್ತು ರಾಜಸ್ಥಾನದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದೆ . ಇದಕ್ಕೆ S-400 ಮತ್ತು ‘ಆಕಾಶ್’ ನಂತಹ ಎಚ್ಚರಿಕೆಯ ವಾಯು ರಕ್ಷಣಾ ವ್ಯವಸ್ಥೆಗಳು ಪಾಕಿಸ್ತಾನದ ದಾಳಿಯನ್ನು ವಿಫಲ ಮಾಡಿತು. ಇದರ ನಂತರ, ಭಾರತ ಪ್ರತೀಕಾರವಾಗಿ ಇಸ್ಲಾಮಾಬಾದ್ ಮೇಲೂ ದಾಳಿ ಮಾಡಿದೆ.

j3tvkannada
ಆದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಸಂಘರ್ಷ ಇನ್ನೂ ಕಡಿಮೆಯಾಗಿಲ್ಲ. ಈ ಹಿನ್ನೆಲೆ ಕೆಲವು ಕಡೆಗಳಲ್ಲಿ ಕಟ್ಟೆಚ್ಚರವನ್ನೂ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕೆ ಬಂದರುಗಳಲ್ಲಿ ಸದ್ಯ ಕಟ್ಟೆಚ್ಚರದ ವಾತಾವರಣ ನಿರ್ಮಾಣವಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ಮೀನುಗಾರರಿಗೆ ದೇಶದ ಭದ್ರತೆಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಪೋಲಿಸ್ ಮತ್ತು ಮೀನುಗಾರಿಕಾ ಇಲಾಖೆ ಒದಗಿಸಿದೆ. ಈ ಸಂದರ್ಭದಲ್ಲಿ ಸೋಮವಾರ (ಮೇ 12, 2025) ನಡೆಯಲಿರುವ ಮಾಕ್ ಡ್ರಿಲ್ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಲಾಗಿದೆ.

j3tvkannada
ಮೀನುಗಾರರನ್ನು ಸೇನೆಯ ಕಣ್ಗಾವಲಿನಂತೆ ಕಾರ್ಯನಿರ್ವಹಿಸಲು ಸಜ್ಜುಗೊಳಿಸುವುದು ಮಾಕ್ ಡ್ರಿಲ್ ಕೂಡಾ ನಡೆಸಲು ಪ್ಲಾನ್ ಮಾಡಲಾಗಿದೆ.
ಇದರಿಂದ ಕರಾವಳಿ ಭದ್ರತೆಯನ್ನು ಇನ್ನಷ್ಟು ಬಲಪಡಿಸುವ ಗುರಿಯನ್ನು ಇಲಾಖೆ ಹೊಂದಿದೆ. ಇಂದು ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಪೋಲಿಸ್ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಮೀನುಗಾರರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಆಳ ಸಮುದ್ರದಲ್ಲಿ ಸಂಶಯಾಸ್ಪದ ಚಟುವಟಿಕೆಗಳನ್ನು ಗುರುತಿಸುವುದು, ತಕ್ಷಣ ಮಾಹಿತಿ ಒದಗಿಸುವ ಕಾರ್ಯವಿಧಾನ ಮತ್ತು ತುರ್ತು ಸಂದರ್ಭಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು ಎಂದು ಹೇಳಲಾಗಿದೆ.