
ದಾವಣಗೆರೆ: ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯಿಂದ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ಕಳೆದ 5 ರಿಂದ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪ್ರಾರಂಭಿಸಿದ್ದು, ಈ ಸಮೀಕ್ಷೆಯ ಸಂದರ್ಭದಲ್ಲಿ ನಮ್ಮ ವೀರಶೈವ ಲಿಂಗಾಯತ ಸಮಾಜ ಬಾಂಧವರು ಗೊಂದಲಕ್ಕೊಳಗಾಗುವುದು ಬೇಡ ಎಂದು ಅಖಿಲ ಭಾರತ ವೀರಶೈವ ಮಹಾ ಸಭಾ ಅಧ್ಯಕ್ಷರಾದ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

j3tvkannada
ಪರಿಶಿಷ್ಟ ಜಾತಿಗೊಳಪಡದ ನಮ್ಮ ಸಮಾಜದವರು, ತಮ್ಮ ಮನೆಗಳಿಗೆ ಸಮೀಕ್ಷೆಗೆ ಬಂದಾಗ ಯಾವುದೇ ಗೊಂದಲಕ್ಕೊಳಗಾಗದೇ ತಮ್ಮ ಕುಟುಂಬದ ಯಜಮಾನರ ಹೆಸರು ಮತ್ತು ಕುಟುಂಬದ ಒಟ್ಟು ಸದಸ್ಯರ ಸಂಖ್ಯೆಯನ್ನು ಮಾತ್ರ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸಬೇಕು. ಇದು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಾಗಿರುವುದರಿಂದ ಹಿಂದುಳಿದ ಮತ್ತು ಸಾಮಾನ್ಯ ವರ್ಗದವರು ಈ ಸಮೀಕ್ಷೆಗೆ ಒಳಪಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.