
ಶಿವಮೊಗ್ಗ: ಜಿಲ್ಲಾ ಬಿ.ಜೆ.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಯೋಧರಿಗೆ ಆತ್ಮಸ್ಥೈರ್ಯ ತುಂಬಲು ಬಿಜೆಪಿಯಿಂದ ತಿರಂಗ ಯಾತ್ರೆ ಆಯೋಜಿಸಲಾಗಿದೆ. ಮೇ 14ರಿಂದ ಯಾತ್ರೆ ಆರಂಭವಾಗಲಿದೆ. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಯಾತ್ರೆ ನಡೆಯಲಿದ್ದು, ಸಾವಿರಾರು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

j3tvkannada
ಮೇ 15ರಂದು ಮಂಗಳೂರು, ಬೆಳಗಾವಿ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ನಡೆಯಲಿದೆ. ಮೇ 16ರಂದು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಯಾತ್ರೆ ನಡೆಯಲಿದೆ. ಮೇ 18 ರಿಂದ 23ರವರಗೆ ತಾಲೂಕು ಕೇಂದ್ರಗಳಲ್ಲಿ ಯಾತ್ರೆ ನಡೆಯಲಿದೆ. ನಿವೃತ್ತ ಯೋಧರು, ಅವರ ಕುಟುಂಬದವರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಜನರನ್ನು ತೊಡಗಿಸಿಕೊಳ್ಳಲಾಗುತ್ತದೆ. ಈ ಯಾತ್ರೆ ಯಶಸ್ವಿಗೊಳಿಸಬೇಕು ಎಂದು ಬಿ.ಜೆ.ಪಿ ಯೋಜನೆ ರೂಪಿಸಿದೆ ಎಂದು ತಿಳಿಸಿದರು.
ದೇಶದ ಯೋಧರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಇದಾಗಿದೆ. ಮೇ 16ರಂದು ಶಿವಮೊಗ್ಗದಲ್ಲಿ ನಡೆಯುವ ತಿರಂಗ ಯಾತ್ರೆಯಲ್ಲಿ ನಾನು ಭಾಗವಹಿಸಲಿದ್ದೇನೆ ಎಂದು ವಿಜಯೇಂದ್ರ ಅವರು ತಿಳಿಸಿದರು.