
ಉಡುಪಿ: ಬೈಕ್ ಅಪಘಾತವಾಗಿ ಹದಿನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ.

j3tvkannada
ಅಬ್ದುಲ್ ಅಜೀಜ್ ಇವರ ಮೋಟಾರ್ ಸೈಕಲ್ನಲ್ಲಿ ಅವರ ಮಗ ಶೇಖ್ ಅಬ್ದುಲ್ ಸೈಫಾನ್ (14) ಈತನನ್ನು ಸಹ ಸವಾರರಾಗಿ ಕುಳ್ಳಿರಿಸಿಕೊಂಡು ಮಂಗಳೂರು-ಉಡುಪಿ ರಸ್ತೆಯಲ್ಲಿ ಪಡುಬಿದ್ರೆ ಕಡೆಯಿಂದ ಉಚ್ಚಿಲ ಕಡೆಗೆ ಸವಾರಿ ಮಾಡಿಕೊಂಡು ಬರುತ್ತಿರುವಾಗ ಮದ್ಯಾಹ್ನ 12:30 ಗಂಟೆಗೆ ಕಾಪು ತಾಲೂಕು ತೆಂಕ ಗ್ರಾಮದ ಎರ್ಮಾಳು ಗರಡಿಯ ಬಳಿ ನಾಯಿಯೊಂದು ರಸ್ತೆಗೆ ಅಡ್ಡಬಂದ ಪರಿಣಾಮ ಮೋಟಾರ್ ಸೈಕಲ್ ಸವಾರರ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯಲ್ಲಿ ಇರುವ ಕಪ್ಪು ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಹಾಗೂ ಸಹಸವಾರರು ದ್ವಿಕ್ರ ವಾಹನ ಸಮೇತ ರಸ್ತೆಗೆ ಬಿದ್ದು ಬೈಕ್ ಗೆ ಬೆಂಕಿ ಹತ್ತಿ ಬಾಗಶಃ ಸುಟ್ಟು ಹೋಗಿದೆ.
ಸವಾರ ಅಬ್ದುಲ್ ಅಜೀಜ್ ಇವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಹ ಸವಾರ ಶೇಖ್ ಅಬ್ದುಲ್ ಸೈಫಾನ್ ಈತನಿಗೆ ತಲೆಗೆ ಹಾಗೂ ಎದೆಗೆ ತರಚಿದ ಗಾಯಗೊಂಡು ಆದರ್ಶ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು, ಚಿಕತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಕ್ರಮ್ ಕಾಪು ತಾಲೂಕು, ಉಡುಪಿ ಇವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.