
ಮಂಡ್ಯ: ಮಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಹತ್ಯೆ ಮಾಡಿದ್ದ ಆರೋಪಿಯ ತಂದೆಯನ್ನು ಹತ್ಯೆಗೀಡಾದ ಶಿಕ್ಷಕಿಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದ್ದು, ಅದರ ಸಿ.ಸಿ.ಟಿ.ವಿ ಫೂಟೇಜ್ ಈಗ ಪೊಲೀಸರಿಗೆ ಲಭ್ಯವಾಗಿದೆ.

j3tvkannada
ನರಸಿಂಹೇಗೌಡ ಅವರ ಪುತ್ರ ನಿತೀಶ್, ವೆಂಕಟೇಶ್ ಅವರ ಪುತ್ರಿ ದೀಪಿಕಾಳನ್ನ ಕೊಲೆ ಮಾಡಿದ್ದ. 16 ತಿಂಗಳು ಕಾದು ಮಗಳ ಸಾವಿಗೆ ಪ್ರತೀಕಾರವಾಗಿ ಆಕೆಯ ತಂದೆ ವೆಂಕಟೇಶ್ ಅವರು, ಕೊಲೆ ಆರೋಪಿ ನಿತೀಶ್ನ ತಂದೆಯನ್ನು ಹತ್ಯೆ ಮಾಡಿದ್ದಾನೆ.
ಇದೇ ತಿಂಗಳ ಮೇ 6ರಂದು ಮಾಣಿಕ್ಯನಹಳ್ಳಿ ಗೇಟ್ ಬಳಿ ನರಸಿಂಹೇಗೌಡ ಟೀ ಕುಡಿಯಲು ಹೋಗಿದ್ದ, ಈ ವೇಳೆ ಸಹವಾಗಿಯೇ ಬಂದ ದೀಪಿಕಾಳ ತಂದೆ ನರಸಿಂಹನಿಗೆ ಚಾಕುವಿನಿಂದ ಚುಚ್ಚಿ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದ. ನನ್ನ ಮಗಳನ್ನ ಕೊಂದು ಬಿಟ್ಟೆ ಅಲ್ವಾ ನಿನ್ನ ಮಗಳ ಮದುವೆಯನ್ನು ಹೇಗೆ ಖುಷಿಯಾಗಿ ಮಾಡ್ತೀಯಾ ನಿನ್ನನ್ನು ಬಿಡಲ್ಲ, ನನ್ನು ಮಗಳನ್ನು ಕೊಂದ ನಿನ್ನ ಮಗನನ್ನೂ ಬಿಡಲ್ಲ ಎನ್ನುತ್ತಲೇ ಮನಸ್ಸೋ ಇಚ್ಚೆ ಚಾಕುವಿನಿಂದ ಇರಿದು, ಚುಚ್ಚಿ ಹತ್ಯೆ ಮಾಡಿದ್ದ. ಈ ಭೀಕರ ದೃಶ್ಯಾವಳಿ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಕಳೆದ ರಾತ್ರಿ ಪೊಲೀಸರಿಗೆ ಲಭ್ಯವಾಗಿದೆ.
ಏನಿದು ಪ್ರಕರಣ:-
ಟೀಚರ್ ದೀಪಿಕಾ ಮತ್ತು ನಿತೀಶ್ ಇಬ್ಬರು ಸ್ನೇಹ ಹಾಗೂ ಸಲುಗೆಯಿಂದಿದ್ದರು. ಇದನ್ನು ಗಮನಿಸಿದ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ನಿತೀಶ್ಗೆ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ದೀಪಿಕಾ ಬಳಿ ಪ್ರಶ್ನಿಸಿದಾಗ ಆತ ನನಗೆ ತಮ್ಮ ಇದ್ದಂತೆ ಎಂದು ಹೇಳಿದ್ದಳು. ಕುಟುಂಬಸ್ಥರ ಎಚ್ಚರಿಕೆಯ ಬಳಿಕ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆ ಆರೋಪಿ ವೆಂಕಟೇಶ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.