
J3tvKannada.in
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅಧಿಕಾರ ಕಳೆದುಕೊಳ್ಳುವ, ಭಯ ಇರುವ ಕಾರಣಕ್ಕೆ ಲಿಂಗಾಯತರ ಸಮಾವೇಶ ಆಯೋಜಿಸಲಾಗಿದೆ,ಹಾಗೂ ಇದೆಲ್ಲ ಯಡಿಯೂರಪ್ಪ ಮತ್ತು ಅವರ ಮಕ್ಕಳ ಹಳೆಯ ಆಟಗಳು ಎಂದು ಶಾಸಕ ಬಿ.ಪಿ ಹರೀಶ್ ಗುಡುಗಿದ್ದಾರೆ. ದಾವಣಗೆರೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಬಿ.ಪಿ ಹರೀಶ್ರವರು ಈ ವೇಳೆ, ಯಡಿಯೂರಪ್ಪ ಅವರನ್ನ ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುವಾಗ ಇದೇ ಲಿಂಗಾಯತ ಸ್ವಾಮೀಜಿಗಳನ್ನ ಇಟ್ಟುಕೊಂಡು ಆಟ ಆಡಿದ್ದರು, ಈ ಬಾರಿಯು ಸಹ ಲಿಂಗಾಯತರ ಸಮಾವೇಶ ಮಾಡುತ್ತಿದ್ದಾರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರರವರು ರಾಜೀನಾಮೆ ಕೊಡಲೇಬೇಕು, ಜೊತೆಗೆ ಪಕ್ಷ ವಿರೋಧಿಗಳು ಹಾಗೂ ಮ್ಯಾಚ್ ಫಿಕ್ಸರ್ಗಳಿಗೆ ಪಾಠ ಕಲಿಸಬೇಕು ,ಎಂದು ಪರೋಕ್ಷವಾಗಿ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ವಿಜಯೇಂದ್ರ ಜೊತೆ ಓಡಾಡುವ ಪಕ್ಷ ವಿರೋಧಿಗಳಿಗೆ ತಕ್ಕ ಪಾಠ ಆಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಯತ್ನಾಳ್ ನನ್ನ ಜೊತೆ ಇರಲಿ ಬಿಡಲಿ,ವಿಜಯೇಂದ್ರ ವಿರುದ್ಧ ನನ್ನ ಹೋರಾಟ ನಿರಂತರವಾಗಿರುತ್ತದೆ. ಎಂದು ಅವರು ಹೇಳಿದ್ದಾರೆ.