
ಚಾಮರಾಜನಗರ: ಆಂಧ್ರ ಪ್ರದೇಶದ ಬಹುಕೋಟಿ ಅಬಕಾರಿ ಹಗರಣ ಪ್ರಕರಣದ ಪ್ರಮುಖ ಆರೋಪಿ ಬಾಲಾಜಿ ಗೋವಿಂದಪ್ಪನನ್ನು ಎಸ್.ಐ.ಟಿ ವಶಕ್ಕೆ ಪಡೆದಿದೆ.

j3tvkannada
ಆರೋಪಿ ಬಾಲಾಜಿ ಗೋವಿಂದಪ್ಪನನ್ನು ವಶಕ್ಕೆ ಪಡೆದ ಎಸ್.ಐ.ಟಿ ಅಧಿಕಾರಿಗಳು ಆಂಧ್ರ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಜಗನ್ಮೋಹನ್ ರೆಡ್ಡಿ ಪತ್ನಿ ವೈ.ಎಸ್ ಭಾರತಿ ಅಧ್ಯಕ್ಷೆಯಾಗಿರುವ ಭಾರತಿ ಸಿಮೆಂಟ್ ಪ್ರೈವೆಟ್ ಲಿಮಿಟೆಡ್ನ ನಿರ್ದೇಶಕ ಹಾಗು ಲೆಕ್ಕಪರಿಶೋಧಕರಾಗಿರುವ ಬಾಲಾಜಿ ಗೋವಿಂದಪ್ಪ ಬಿಳಿಗಿರಿರಂಗನ ಬೆಟ್ಟದ ಖಾಸಗಿ ರೆಸಾರ್ಟ್ನಲ್ಲಿ ಕಳೆದ ಒಂದು ವಾರದಿಂದ ಉಳಿದುಕೊಂಡಿದ್ದರು.
ಜಗನ್ಮೋಹನ್ ರೆಡ್ಡಿ ಸಿ.ಎಂ ಆಗಿದ್ದ ಅವಧಿಯಲ್ಲಿ ಅಬಕಾರಿ ಹಗರಣ ನಡೆದಿತ್ತು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ಬಾಲಾಜಿ ಗೋವಿಂದಪ್ಪಗೆ ನೋಟಿಸ್ ನೀಡಿತ್ತು. ನೋಟಿಸ್ ಜಾರಿಯಾದ ಬಳಿಕ ಆಂಧ್ರದಿಂದ ಗೋವಿಂದಪ್ಪ ನಾಪತ್ತೆಯಾಗಿದ್ದರು. ಆರೋಪಿಯ ಜಾಡು ಪತ್ತೆ ಮಾಡಿದ ಎಸ್.ಐ.ಟಿ ಬಾಲಾಜಿ ಗೋವಿಂದಪ್ಪನನ್ನು ವಶಕ್ಕೆ ಪಡೆದಿದೆ.
ಆರೋಪಿ ಬಾಲಾಜಿ ಗೋವಿಂದಪ್ಪ ರಾತ್ರಿ ಸಂಚಾರ ನಿರ್ಬಂಧ ಉಲ್ಲಂಘನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಬಿ.ಆರ್.ಟಿ ಅರಣ್ಯಾಧಿಕಾರಿಗಳು ನಿರಾಕರಿಸಿದ್ದಾರೆ. ಬಿಳಿಗಿರಿರಂಗನ ಬೆಟ್ಟಕ್ಕೆ ಗುಂಬಳ್ಳಿ ಚೆಕ್ಪೋಸ್ಟ್ ಮೂಲಕ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಪ್ರವೇಶ ನಿರ್ಬಂಧ ಇದೆ. ಈ ಸಮಯದಲ್ಲಿ ಯಾರಿಗೂ ಪ್ರವೇಶಾವಕಾಶ ನೀಡಿಲ್ಲ. ಆರೋಪಿತ ವ್ಯಕ್ತಿ ಮೇ 8 ರಂದು ಬೆಳಿಗ್ಗೆ 9 ಗಂಟೆ ನಂತರ ಬಿಳಿಗಿರಿರಂಗನ ಬೆಟ್ಟಕ್ಕೆ ಬಂದಿದ್ದಾರೆ. ಸಿ.ಸಿ.ಟಿ.ವಿ ಪರಿಶೀಲಿಸಿದ್ದಾರೆ. ನಿರ್ಬಂಧಿತ ಅವಧಿಯಲ್ಲಿ ಯಾವುದೇ ಖಾಸಗಿ ವಾಹನಕ್ಕೆ ಪ್ರವೇಶ ನೀಡಿಲ್ಲ ಎಂದು ಬಿ.ಆ.ರ್ಟಿ ಯಳಂದೂರು ವಲಯ ಅರಣ್ಯಾಧಿಕಾರಿ ನಾಗೇಂದ್ರ ನಾಯಕ್ ತಿಳಿಸಿದ್ದಾರೆ.