
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಕಳೆದ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದಂತೆ ಗೌರವ ಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು ಎಂದು ಘೋಷಿಸಲಾಗಿದೆ.

j3tvkannada
ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕ ಕಡತದಲ್ಲಿ ಆಶಾ ಕಾರ್ಯಕರ್ತೆಯು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ/ಪ್ರದೇಶದ ವ್ಯಾಪ್ತಿಯಲ್ಲಿ ಸಮುದಾಯದ ಆರೋಗ್ಯ ಸ್ಥಿತಿಯ ಸುಧಾರಣೆಗೆ ಆರೋಗ್ಯ ಸೇವೆಗಳನ್ನು ಪಡೆಯಲು ಮತ್ತು ಆರೋಗ್ಯ ಆರೈಕೆ ಚಟುವಟಿಕೆಗಳು ಹಾಗೂ ನಡವಳಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 1000 ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಪ್ರತಿ 2500 ಜನಸಂಖ್ಯೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯನ್ನು ಆಯ್ಕೆ ಮಾಡಲಾಗುವುದು, ಇದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿಯಲ್ಲಿ 42,524 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 41000 ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆಯುಷ್ಮಾನ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮತ್ತು ಸಾಮೂಹಿಕ ನೆಲೆಗಟ್ಟಿನ ಕಾರ್ಯನಿರ್ವಹಣೆಯನ್ನು ಉತ್ತೇಜಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಿಂದ ತಂಡ ಆಧಾರಿತ ಪ್ರೋತ್ಸಾಹ ಧನವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು- ರೂ.1,500, ಆರೋಗ್ಯ ನಿರೀಕ್ಷಣಾಧಿಕಾರಿಗಳು- ರೂ.1500, ಆಶಾ ಕಾರ್ಯಕರ್ತೆಯರು – ರೂ.1000, ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ-ಆಯುಷ್ಮಾನ್ ಆರೋಗ್ಯ ಮಂದಿರ ಕೇಂದ್ರ ಸ್ಥಾನದ ಆರೋಗ್ಯ ಉಪಕೇಂದ್ರಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15004 ಆಶಾ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿಯಲ್ಲಿ ತಂಡ ಆಧಾರಿತ ಪ್ರೋತ್ಸಾಹ ಧನವು ಅನುಮೋದನೆಯಾಗಿರುವುದಿಲ್ಲ.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಸಮಾನವಾಗಿ ತಂಡ ಆಧಾರಿತ ಪ್ರೋತ್ಸಾಹ ಧನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 1000/- ಗಳಂತೆ ಪ್ರೋತ್ಸಾಹ ಧನವನ್ನು ನೀಡಲು 1800.48 ಲಕ್ಷಗಳನ್ನು ರಾಜ್ಯ ಸರ್ಕಾರದ ಅನುದಾನದಿಂದ ಲಕ್ಷ ಶೀರ್ಷಿಕೆ 2211-00-103-0-11 ಉಪ ಲೆಕ್ಕ ಶೀರ್ಷಿಕೆ 324 ಅಡಿಯಲ್ಲಿ ಒದಗಿಸಲಾದ ಅನುದಾನದಿಂದ ಭರಿಸಲು ಅನುಮೋದನೆ ನೀಡುವಂತೆ ಕೋರಲಾಗಿದೆ.