
j3tvkannada
ಹಾವೇರಿ: ಕಾರಿನ ಗಾಜು ಹೊಡೆದು, ಕ್ಷಣಾರ್ಧದಲ್ಲೇ, 33 ಲಕ್ಷ ದೋಚಿದ, ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ, ಸಿವಿಲ್ ಕಾಂಟ್ರ್ಯಾಕ್ಟರ್ ಸಂತೋಷ್ 33 ಲಕ್ಷ ರೂ. ಹಣವನ್ನು ಸಂಬಂಧಿಕರ ಖಾತೆಯ ಚೆಕ್ ಮುಖಾಂತರ ನಗದನ್ನು ಡ್ರಾ ಮಾಡಿಕೊಂಡಿರುತ್ತಾರೆ. ಡ್ರಾ ಮಾಡಿದ ಹಣವನ್ನು ಕಾರಿನ ಹಿಂಭಾಗದ ಸೀಟಿನಲ್ಲಿ ಇಟ್ಟಿರುತ್ತಾರೆ.
2 ಬೈಕ್ಗಳಲ್ಲಿ ಬಂದಿದ್ದ 4 ಜನ ಕಳ್ಳರಲ್ಲಿ ಒಬ್ಬ ಕಾರಿನ ಬಳಿ ಸುತ್ತಾಡಿ, ಕಾರಿನ, ಕಿಟಕಿ ಗ್ಲಾಸ್ ಹೊಡೆದು ,ಹಣವಿದ್ದ ಬ್ಯಾಗ್ ಎಗರಿಸಿದ್ದಾನೆ. ನಂತರ ಬೈಕ್ನಲ್ಲಿ ಬಂದ ಮತ್ತೊಬ್ಬ ಖದೀಮ ಆತನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಘಟನೆಯ ಸಂಬಂಧ ಹಾವೇರಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳರ ಕೈಚಳಕದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಬಂಧಿತ ಆರೋಪಿ ಎಂದು ಎಸ್ಪಿ ಅಂಶುಕುಮಾರ್ ರವರು ತಿಳಿಸಿದ್ದಾರೆ.