ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿಗೆ ಬೆಂಕಿ ತಗುಲಿ ಕಾರು ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಆಂಧ್ರ ಮೂಲದ ಮದನಪಲ್ಲಿ ನಿವಾಸಿಗಳಾದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ,ಇಬ್ಬರೂ ಸುಟ್ಟು ಕರಕಲಾಗಿದ್ದಾರೆ. ಮೃತರನ್ನು ಧನಂಜಯ ರೆಡ್ಡಿ(31) ಮತ್ತು ಕಲಾವತಿ(35) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಇನ್ನುಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಖಾಸಗಿ ಬಸ್ನಲ್ಲಿದ್ದ ಪ್ರಯಾಣಿಕರು ಬಚಾವಾಗಿದ್ದಾರೆ. ಚಾಲಕರು ಪ್ರತೀ ಕ್ಷಣವೂ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಒಂದು ಕ್ಷಣ ಮೈಮತರೂ ಇಂತಹ ಅನಾಹುತಗಳಾಗುತ್ತವೆ.