
ರಾಮನಗರ: ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ ಕುರಿತು ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ರಿಕ್ಕಿ ರೈ 20 ದಿನಗಳ ಕಾಲಾವಕಾಶ ಕೇಳಿದ್ದು, ಮೆಡಿಕಲ್ ರಿಪೋರ್ಟ್ ಕೊಟ್ಟು ಸಮಯಾವಕಾಶ ಕೇಳಿದ್ದಾರೆ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ.

j3tvkannada
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣ ಸಂಬಂಧ ಎಲ್ಲಾ ರೀತಿಯಲ್ಲೂ ತನಿಖೆ ನಡೆಯುತ್ತಿದೆ. ಕೆಲವೊಂದು ರಿಪೋರ್ಟ್ಗಳು ಬರಬೇಕಾಗಿದೆ, ಅದಕ್ಕಾಗಿ ಕಾಯುತ್ತಿದ್ದೇವೆ. ಈ ಎಲ್ಲಾ ವರದಿಗಳು ಬಂದ ಬಳಿಕ ಚಾರ್ಜ್ಶೀಟ್ ಫೈಲ್ ಮಾಡುತ್ತೇವೆ. ಜೊತೆಗೆ ರಿಕ್ಕಿ ರೈಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೇವೆ. ಅವರು ಬಂದ ನಂತರ ತನಿಖೆ ಮುಂದುವರಿಸುತ್ತೇವೆ ಎಂದರು.
ಪ್ರಕರಣದಲ್ಲಿ ವಿಠಲ್ ಪ್ರಮುಖ ಆರೋಪಿಯಾಗಿದ್ದಾನೆ. ಆತನನ್ನು ದಸ್ತಗಿರಿ ಮಾಡಿ ಈಗಾಗಲೇ ಜೈಲಿಗೆ ಬಿಟ್ಟಿದ್ದೇವೆ. ಕೆಲವೊಂದು ಸಾಕ್ಷ್ಯಾಧಾರಗಳನ್ನು ಎಫ್.ಎಸ್.ಎಲ್ಗೆ ಕಳುಹಿಸಿದ್ದೇವೆ. ಆ ವರದಿಗಳು ಬಂದ ಮೇಲೆ ಪ್ರಕರಣ ತನಿಖೆ ಚುರುಕುಗೊಳಿಸುತ್ತೇವೆ. ಸದ್ಯಕ್ಕೆ ವಿಠಲ್ ಒಬ್ಬನೇ ಕೇಸ್ನಲ್ಲಿ ಆರೋಪಿಯಾಗಿದ್ದಾನೆ. ರಿಕ್ಕಿ ರೈ ವಿಚಾರಣೆಗೆ ಹಾಜರಾದ ಬಳಿಕ ಮತ್ತಷ್ಟು ವಿಚಾರಗಳು ಹೊರಬರಬೇಕಿದೆ ಎಂದು ತಿಳಿಸಿದರು.