
ತುಮಕೂರು: ಆಂಧ್ರಪ್ರದೇಶ ಕರ್ನೂಲ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ತುಮಕೂರು ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ನವೀನ್, ಸಂತೋಷ್ ಹಾಗೂ ಲೋಕೇಶ್ ಮೃತಪಟ್ಟಿದ್ದಾರೆ.

j3tvkannada
ಇದರಲ್ಲಿ ಕೆಂಕೆರೆ ನವೀನ್ ಚಿಕ್ಕನಾಯಕನಹಳ್ಳಿ, ಸ್ಥಳೀಯ ಬಿ.ಜೆ.ಪಿ ಮುಖಂಡರಾಗಿದ್ದು, ತಾಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷ ಆಗಿದ್ದರು. ಸಂತೋಷ್ ಕೂಡಾ ಬಿ.ಜೆ.ಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಆಗಿದ್ದರು.
ಸಂತೋಷ್ ಹುಟ್ಟುಹಬ್ಬದ ಆಚರಣೆಗಾಗಿ ಆಂದ್ರ ಪ್ರದೇಶದ ಪ್ರವಾಸಕ್ಕೆ ಒಟ್ಟು 6 ಮಂದಿ ತೆರಳಿದ್ದರು. ಮಂತ್ರಾಲಯ ದರ್ಶನ ಮುಗಿಸಿ ಶ್ರೀಶೈಲಕ್ಕೆ ಹೋಗುವ ದಾರಿಯಲ್ಲಿ ಅಪಘಾತ ಆಗಿದೆ. ಕರ್ನೂಲ್ ಬಳಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಈ ಪೈಕಿ ತೀವ್ರವಾಗಿ ಗಾಯವಾದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನು ಮೂವರಿಗೆ ಗಾಯಗಳಾಗಿವೆ.