
ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಕಳೆದ ಕೆಲವು ತಿಂಗಳಿನಿಂದ ಹಣ ಜಮೆಯಾಗಿಲ್ಲ. ಈ ಬಗ್ಗೆ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಇಲ್ಲಿವರೆಗೆ ಶೀಘ್ರದಲ್ಲೇ ಹಣ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದ ಸರ್ಕಾರ, ಇದೀಗ ದಿಢೀರ್ ಯೂಟರ್ನ್ ತೆಗೆದುಕೊಂಡಂತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಗೃಹಲಕ್ಷ್ಮಿ ಹಣವನ್ನು ನಾವು ಪ್ರತಿ ತಿಂಗಳು ಕೊಡ್ತೀವಿ ಅಂತಾ ಹೇಳಿಲ್ಲ ಎಂದು ಡಿ.ಕೆ.ಶಿ ಹೇಳಿದ್ದು, ಸಂಚಲನ ಸೃಷ್ಟಿಸಿದೆ.

j3tvkannada
ಬಳ್ಳಾರಿಯಲ್ಲಿ ಇಂದು ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕುರಿತಾದ ಸುದ್ದಿ ಗೋಷ್ಠಿಯಲ್ಲಿ ಡಿ.ಕೆ ಶಿವಕುಮಾರ್ ಅವರು ಈ ರೀತಿ ಮಾತನಾಡಿರುವುದು ಅಚ್ಚರಿ ಮೂಡಿಸಿದೆ. ಇಲ್ಲಿವರೆಗೆ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹಣದ ಕೊರತೆ ಇಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದ ಡಿಸಿಎಂ ಇದೀಗ ದಿಢೀರನೆ ಉಲ್ಟಾ ಹೊಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ನೋಡಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ ಎಂದಿದ್ದಾರೆ. ನೀವು ತೆರಿಗೆ ಕಟ್ಟುತ್ತಾ ಇರಬೇಕು, ನಾವು ಹಣ ಕೊಡುತ್ತಾ ಇರಬೇಕು. ಈಗ ಉದಾಹರಣೆಗೆ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆಯೇ ಹಣ ಬಂದುಬಿಡುತ್ತಾ ಎರಡ್ಮೂರು ವರ್ಷ ಆಗುತ್ತೆ ಅಲ್ವಾ ಅದೇ ರೀತಿ ಈ ಹಣ ಕೂಡ ಬಂದಾಗ ಬರುತ್ತೆ ಎನ್ನುವ ಮೂಲಕ ಜಾರಿಕೊಂಡಿದ್ದಾರೆ. ನಾಳೆ ನಡೆಯಲಿರುವ ಸರ್ಕಾರದ ಎರಡು ವರ್ಷಗಳ ಸಾಧನೆಯ ಸಮರ್ಪಣಾ ಸಂಕಲ್ಪ ಸಮಾವೇಶಕ್ಕೆ ಉಕ್ಕಿನ ನಗರಿ ಹೊಸಪೇಟೆ ಸಕಲ ರೀತಿಯಲ್ಲಿ ಸಜ್ಜಾಗಿದೆ. ಇಂದು ವೇದಿಕೆಗೆ ಭೇಟಿ ನೀಡಿ ಅಂತಿಮ ತಯಾರಿಗಳನ್ನು ಮೇಲ್ವಿಚಾರಣೆ ನಡೆಸಿದ್ದೇನೆ. ವಿಜಯನಗರ ಅನೇಕ ಇತಿಹಾಸಗಳನ್ನು ತನ್ನೊಳಗಿಟ್ಟುಕೊಂಡಿರುವ ಜಿಲ್ಲೆ. ಮಾಜಿ ಪ್ರಧಾನಿಗಳಾದ ಶ್ರೀಮತಿ ಇಂದಿರಾ ಗಾಂಧಿಯವರು ಇಲ್ಲಿಗೆ ಬಂದು ಭಾಷಣ ನೀಡಿದ ಇತಿಹಾಸವಿದೆ. ಹೀಗಾಗಿ ನಾಳಿನ ಕಾರ್ಯಕ್ರಮದಲ್ಲಿ ಅವರ ಪುತ್ಥಳಿಯನ್ನೂ ಲೋಕಾರ್ಪಣೆ ಮಾಡುತ್ತಿದ್ದೇವೆ ಎಂದಿದ್ದಾರೆ.