
ದಾವಣಗೆರೆ : ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಕ್ವಿಂಟಾಲ್ ಅಡಿಕೆಯ ಗರಿಷ್ಠ ದರ 59,312 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಏರಿಕೆಯಾಗಿದ್ದು, ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

j3tvkannada
ಇದೀಗ ಮಾ1 ರಂದು ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್ಗಳಲ್ಲಿ) ಗರಿಷ್ಠ ದರ 59,312 ರೂಪಾಯಿ, ಕನಿಷ್ಠ ದರ 54,479 ರೂಪಾಯಿ ಇದ್ದು, ಸರಾಸರಿ ಬೆಲೆ 57,685 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 32,679 ರೂಪಾಯಿ, ಕನಿಷ್ಠ ದರ 27,679 ರೂಪಾಯಿ, ಸರಾಸರಿ ದರ 29,431 ರೂಪಾಯಿ ಆಗಿದೆ.
ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಅದರಲ್ಲೂ ಇದೀಗ ಬೇಸಿಗೆಗೂ ಮುನ್ನ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆ ಅಡಿಕೆ ತೋಟದ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ.
ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಇಲ್ಲಿಯವರೆಗೂ ಸತತವಾಗಿ ಏರಿಕೆಯಾಗುತ್ತಲೇ ಬಂದಿದ್ದು, ಏಪ್ರಿಲ್ ಅಂತ್ಯಕ್ಕೆ 60,000 ರೂಪಾಯಿ ದಾಟಿತ್ತು. ಆದರೆ ಇದೀಗ ಮೇ ಆರಂಭದಲ್ಲಿ ಇಳಿಕೆಯಾಗಿ ಮತ್ತೆ ಏರಿಕೆಯಾಗಿದೆ. ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.
2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. ಇದೀಗ 2025ರ ಏಪ್ರಿಲ್ ತಿಂಗಳ ಆರಂಭದಿಂದ ಏರಿಕೆ ಆಗುತ್ತಲೇ ಬಂದಿತ್ತು. ಆದರೆ ಮತ್ತೆ ಮೇ ಆರಂಭದಲ್ಲಿ ಮತ್ತೆ ಇಳಿಕೆಯಾಗಿ ಇದೀಗ ಏರಿಕೆಯತ್ತ ಸಾಗಿದೆ. ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಸಹ ಕಳೆದ ವರ್ಷದಂತೆ ಮುಂಗಾರು ಆರ್ಭಟಿಸುವ ಮುನ್ಸೂಚನೆ ಇದ್ದು ಉತ್ತಮ ಫಸಲಿನ ಜೊತೆ ಮತ್ತಷ್ಟು ಬೆಲೆ ಹೆಚ್ಚಳ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ.
ಸದ್ಯ ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿದ್ದು, ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಅದರಲ್ಲೂ ಮುಂದಿನ ದಿನಗಳಲ್ಲಿ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಸೇರಿದಂತೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ ಜಿಲ್ಲೆ ಸಹ ದಕ್ಷಿಣ ಒಳನಾಡಿಗೆ ಸೇರಲಿದೆ. ಈಗಾಗಲೇ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದು, ಅಡಿಕೆ ಬೆಳಗಾರರಿಗೆ ಸಂತಸ ಮೂಡಿದಂತಾಗಿದೆ.