

j3tvkannada
ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿ.ಎ ಗ್ರಾಮದಲ್ಲಿ ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಮತ್ತು ಒಂದು ಎತ್ತು ಮೃತಪಟ್ಟಿದೆ. ಗಣೇಶ್ ಕಾಂಬಳೆ (9), ದೀಪಕ್ ಕಾಂಬಳೆ (11) ಮೃತರು. ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಹಳ್ಳಕ್ಕೆ ಸೇತುವೆ ಇಲ್ಲದಿರುವುದರಿಂದ, ಸಂಬರಗಿ ಗ್ರಾಮದಿಂದ ನಾಗನೂರ ಪಿ.ಎ ಗ್ರಾಮಕ್ಕೆ ಹರಿಯುತ್ತಿರುವ ನೀರಿನಲ್ಲೇ ಎತ್ತಿನ ಗಾಡಿಯಲ್ಲಿ ತೆರಳಿದ್ದಾರೆ. ಸುತ್ತಲೂ ನೀರು ಇದ್ದಿದ್ದರಿಂದ ದಾರಿ ಕಂಡಿಲ್ಲ. ನೀರಿನ ರಭಸಕ್ಕೆ ಎತ್ತಿನ ಗಾಡಿ ಮಗುಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.