
ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅಬ್ಬರ ತಗ್ಗಿದೆ. ಇದರ ಪರಿಣಾಮ ಇಂದು ಜಿಲ್ಲೆಯ ಜೀವನದಿ ಹೇಮಾವತಿ ನದಿಯ ಒಳಹರಿವು ಸಹ ಇಳಿಕೆಯಾಗಿದೆ.

j3tvkannada
ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ಭಾಗದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. 37.103 ಟಿ.ಎಂ.ಸಿ ನೀರು ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಸದ್ಯ, 23.136 ಟಿ.ಎಂ.ಸಿ ನೀರು ಸಂಗ್ರಹವಾಗಿದೆ.
ಇದೀಗ ಹೇಮಾವತಿ ಜಲಾಶಯಕ್ಕೆ 11,252 ಕ್ಯೂಸೆಕ್ ಒಳಹರಿವಿದ್ದು, ನದಿಯಿಂದ 3,575 ಕ್ಯೂಸೆಕ್ ಹೊರಹರಿವಿದೆ. ಈ ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2,922.00 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 2,905.10 ಅಡಿಗಳಷ್ಟಿದೆ.