
ಬಾಗಲಕೋಟೆ: ಇತ್ತೀಚೆಗೆ ಸೈನಿಕನಾಗಿ ಕರ್ತವ್ಯಕ್ಕೆ ಹಾಜರಾಗಿ ತರಬೇತಿ ಪಡೆಯುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಛತ್ತೀಸ್ಗಢದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

j3tvkannada
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟಿ ತಾಂಡಾ ಗ್ರಾಮದ ಉಪೇಂದ್ರ ಸೋಮನಾಥ ರಾಥೋಡ್(24) ಮೂರು ತಿಂಗಳ ಹಿಂದೆ ಅಸ್ಸಾಂ ರೈಫಲ್ಸ್ ಸೇರಿದ್ದರು. ಛತ್ತೀಸ್ಗಢದಲ್ಲಿ ಕರ್ತವ್ಯಕ್ಕೆ ಹಾಜರಾಗಿ ತರಬೇತಿಯಲ್ಲಿದ್ದಾಗ ಸೋಮನಾಥ ರಾಥೋಡ್ ಅವರಿಗೆ ಹೃದಯಾಘಾತವಾಗಿದೆ.
ಮೃತ ಯೋಧನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾರ್ಥಿವ ಶರೀರ ಶುಕ್ರವಾರ ಮಧ್ಯಾಹ್ನ ತಾಲೂಕಿಗೆ ಬರಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.