
ದಕ್ಷಿಣ ಕನ್ನಡ(ಮಂಗಳೂರು): ಗುಡ್ಡ, ಮನೆ ಕುಸಿದ ಪರಿಣಾಮ ಬಾಲಕಿ, ಮಹಿಳೆ ಸಾವನ್ನಪ್ಪಿರುವ ಘಟನೆ ಮಂಗಳೂರಿನ ದೇರಳ ಕಟ್ಟೆ ಸಮೀಪದಲ್ಲಿ ನಡೆದಿದೆ.

j3tvkannada
ನಯೀಮ (10), ಪ್ರೇಮ ಪೂಜಾರಿ (60) ಮೃತರು. ರಾತ್ರಿಯಿಡೀ ಸುರಿದ ಭಾರೀ ಮಳೆ ಪರಿಣಾಮ ದೇರಳಕಟ್ಟೆ ಸಮೀಪದ ಕಾನಕೆರೆ ಹಾಗೂ ಮೊಂಟೆಪದವು ಕೋಡಿ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಂದು ಮಗು ಪ್ರಜ್ಞಾನಹೀನ ಸ್ಥಿತಿಯಲ್ಲಿದೆ.
ಸ್ಥಳಕ್ಕೆ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಸದ್ಯ ಕಾಂತಪ್ಪ ಪೂಜಾರಿ (65) ಅವರನ್ನು ರಕ್ಷಣೆ ಮಾಡಲಾಗಿದ್ದು, ಅಶ್ವಿನಿ (31), ಆರ್ಯನ್ (2.5) ಆರುಶ್ (1) ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ ತಾಯಿ-ಮಕ್ಕಳಿಗೆ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದು ತಾಯಿ ಮತ್ತು ಮಗು ಜೀವಂತವಾಗಿದ್ದು, ಮತ್ತೊಂದು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿದೆ.