
ಮೈಸೂರು: ಕೆ.ಆರ್. ವೃತ್ತದಲ್ಲಿ ಕುಡುಕನೊಬ್ಬ ಕುಡಿದ ಮತ್ತಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಕುಳಿತು ಪುಂಡಾಟ ಮೆರೆದಿದ್ದಾನೆ. ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು ಅವಮಾನಿಸಿದ್ದಾನೆ. ಈ ಘಟನೆಯಿಂದ ಮೈಸೂರಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಕೆ.ಆರ್. ವೃತ್ತದಲ್ಲಿ ಕುಡುಕನಿಂದ ಅಸಭ್ಯ ವರ್ತನೆ ನಡೆದಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಅವಮಾನ ಮಾಡಲಾಗಿದೆ. ಕುಡುಕ ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು ಪುಂಡಾಟ ಮೆರೆದಿದ್ದಾನೆ. ಸಾರ್ವಜನಿಕರು ಪ್ರತಿಮೆಗೆ ರಕ್ಷಣೆ ನೀಡಲು ಆಗ್ರಹಿಸಿದ್ದಾರೆ. ಪೊಲೀಸರು ಬರುವಷ್ಟರಲ್ಲಿ ಆತ ಓಡಿಹೋಗಿದ್ದಾನೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಸೂಕ್ತ ರಕ್ಷಣೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು, ಅವರ ಮೇಲೆ ಕುಳಿತಿದ್ದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದರು. ಆದರೆ, ಪೊಲೀಸರು ಬರುವಷ್ಟರಲ್ಲಿ ಆತ ಅಲ್ಲಿಂದ ಓಡಿಹೋಗಿದ್ದಾನೆ. ಪೊಲೀಸ್ ವ್ಯವಸ್ಥೆಯ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಹೃದಯ ಭಾಗದಲ್ಲಿ ಈ ಘಟನೆ ನಡೆದಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಕುಡುಕ ಕುಳಿತಿದ್ದನ್ನು ಕಂಡ ಜನರು ಬೆಚ್ಚಿಬಿದ್ದಿದ್ದಾರೆ. ಆತ ಉದ್ದಟತನದಿಂದ ವರ್ತಿಸಿದ್ದಾನೆ. ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಸಂಜೆ ಸುಮಾರು 6 ಗಂಟೆಗೆ, ಈ ಯುವಕ ಹತ್ತಿ ಕುಳಿತಿದ್ದಾನೆ. ಅಷ್ಟೇ ಅಲ್ಲ, ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು, ಪ್ರತಿಮೆಯ ತಲೆಯ ಮೇಲೆ ಕುಳಿತು ಅದನ್ನು ಒಡೆದು ಹಾಕುವ ಯತ್ನ ಮಾಡಿದ್ದಾನೆ. ಈ ಘಟನೆಯನ್ನು ಕಂಡ ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ.

“ನಾಲ್ವಡಿಯವರ ಪ್ರತಿಮೆಗೆ ಸೂಕ್ತ ರಕ್ಷಣೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ”. ಈ ಘಟನೆಯಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಒತ್ತಾಯಿಸಿದ್ದಾರೆ. ಪ್ರತಿಮೆಗೆ ಭದ್ರತೆ ಒದಗಿಸುವಂತೆ ಆಗ್ರಹಿಸಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ ಎಂದರು. ಈ ಕಿಡಿಗೇಡಿಯು ಪ್ರತಿಮೆ ಮೇಲೆ ಬೆಂಕಿ ಕಡ್ಡಿ ಗೀರುವುದು, ಬೀಡಿ ಇಡುವುದನ್ನು ಮಾಡುತ್ತಲೇ ಇದ್ದ ಎಷ್ಟು ಹೇಳಿದರೂ ಪ್ರತಿಮೆ ಇರುವ ಆವರಣದಿಂದ ಹೊರ ಬರುತ್ತಲೇ ಇರಲಿಲ್ಲ. ಕೊನೆಗೆ ಪೊಲೀಸರು ಬಂದಾಗ, ಆತ ಸ್ಥಳದಿಂದ ಕಾಲ್ಕಿತ್ತ. ಪ್ರತಿಮೆಗೆ ಸೂಕ್ತ ಭದ್ರತೆ ಕಲ್ಪಿಸುವವರೆಗೆ ಇಲ್ಲಿಂದ ಹೋಗಲ್ಲವೆಂದು ಪಟ್ಟು ಹಿಡಿದು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಮೆಗೆ ಸೂಕ್ತ ರಕ್ಷಣೆ ನೀಡುವ ಭರವಸೆ ನೀಡಿದರು ನಂತರ ಅಲ್ಲಿಂದ ನಿರ್ಗಮಿಸಿವೆವು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಯನ್ನು ಗುರುತಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಕಿಡಿಗೇಡಿಯ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಿ ಇನ್ನೂ ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ಇದು ಅನ್ನದಾತ, ವಿದ್ಯಾದಾತ ನಾಲ್ವಡಿಯವರಿಗಾದ ಅವಮಾನ ಮಾತ್ರವಲ್ಲ, ಇಡೀ ಮೈಸೂರು ಸಂಸ್ಥಾನದ ಜನರಿಗೆ ಮಾಡಿದ ಅವಹೇಳನೆ. ಕಿಡಿಗೇಡಿಯ ವಿರುದ್ಧ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.