
ಬೆಂಗಳೂರು ಗ್ರಾಮಾಂತರ : ಕಾರ್ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನೆಲಮಂಗಲ ನಗರದ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಡೆದಿದೆ.

j3tvkannada
ಖದೀಮರು ಕಾರಿನ ಗ್ಲಾಸ್ ಒಡೆದು ನಗದು ದೋಚುತ್ತಿರುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅತೀಕ್ ರೆಹಮಾನ್ ಎಂಬವರಿಗೆ ಸೇರಿದ್ದ 11.5 ಲಕ್ಷ ರೂ. ನಗದು ಹಣವನ್ನು ಕಳ್ಳರು ದೋಚಿದ್ದಾರೆ.
ಅತೀಕ್ ರೆಹಮಾನ್ ದಾಬಸ್ ಪೇಟೆಯಲ್ಲಿ ಲಾಜಿಸ್ಟಿಕ್ಸ್ ನಡೆಸುತ್ತಿದ್ದರು. ಈ ವೇಳೆ ಅತೀಕ್ ಅಣ್ಣ ಬ್ಯಾಂಕ್ನಿಂದ ಹಣ ತರುವಂತೆ ಸೂಚನೆ ನೀಡಿದ್ದರು. ಅದರಂತೆ ಅತೀಕ್ ದಾಬಸ್ ಪೇಟೆಯಿಂದ ಹಣ ತೆಗೆದುಕೊಂಡು ಬಂದಿದ್ದರು.
ಬಳಿಕ ಅವರು ಕಾರಿನಲ್ಲಿ ಹಣದ ಬ್ಯಾಗ್ ಇಟ್ಟು, ನೆಲಮಂಗಲದಲ್ಲಿ ಮಿಕ್ಸಿ ರಿಪೇರಿ ಮಾಡಿಸಲು ಹೋಗಿದ್ದರು. ವಾಪಸ್ ಬಂದು ನೋಡಿದಾಗ ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಘಟನೆಯ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.