
ಬೆಂಗಳೂರು: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಬೆಂಗಳೂರಿನಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ರಾಜ್ಯದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಮತ್ತು ಇಲಾಖೆಯ ಕಾರ್ಯ ಚಟುವಟಿಕೆಗಳ ಕುರಿತು ವಿವರವಾದ ಚರ್ಚೆ ನಡೆಸಿದ್ದಾರೆ. ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹತ್ವದ ಸುದ್ದಿಯೊಂದನ್ನು ಹೇಳಿದ್ದಾರೆ.

j3tvkannada
ಸಂಪ್ರದಾಯದಂತೆ, ಪಕ್ಷದ ಅಧ್ಯಕ್ಷರು ಬೆಂಗಳೂರಿಗೆ ಆಗಮಿಸಿದಾಗ ಭೇಟಿಯಾಗಿ ಮಾತುಕತೆ ನಡೆಸುವುದು ವಾಡಿಕೆ. ಇಂದು ನಾವು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ. ನನ್ನ ಇಲಾಖೆಯ ಕಾರ್ಯಗಳು, ರಾಜ್ಯದ ಅಭಿವೃದ್ಧಿ ಯೋಜನೆಗಳು ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.