
ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಭೇಟಿ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಅನೇಕರು ಸರ್ಪ ಸಂಸ್ಕಾರ ಪೂಜೆ ಮಾಡಿಸಿ ದೋಷ ನಿವಾರಣೆ ಮಾಡಿಕೊಳ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೈಫ್ ಕೂಡ ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ. ಸಂತಾನಕ್ಕಾಗಿ ನಟಿ ಸರ್ಪ ಸಂಸ್ಕಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ. ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಬಾಲಿವುಡ್ ನಟಿ ಸಂತಾನ ಪ್ರಾಪ್ತಿಗಾಗಿ ಪೂಜೆ ಮಾಡ್ತಿದ್ದಾರೆ ಎನ್ನಲಾಗ್ತಿದೆ.

ಆದಿ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗಶಾಲೆಯಲ್ಲಿ ಇಂದು ಮತ್ತು ನಾಳೆ ಸುಬ್ರಹ್ಮಣ್ಯನಿಗೆ ಸೇವೆ ನೆರವೇರಿಸಲಿದ್ದಾರೆ. ಸಂತಾನಕ್ಕಾಗಿ ನಟಿ ಕತ್ರಿನಾ ಸುಬ್ರಹ್ಮಣ್ಯನ ಸ್ವಾಮಿಯ ಮೊರೆ ಹೋಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರದ ಇವತ್ತಿನ ಪೂಜೆ ಮುಗಿಸಿದ ನಟಿ ಕತ್ರಿನಾ ಕೈಫ್, ಮಧ್ಯಾಹ್ನದ ಅನ್ನ ಪ್ರಸಾದ ಸೇವಿಸಿ ಖಾಸಗಿ ಹೋಟೆಲ್ಗೆ ತೆರಳಿದ್ರು. ನಾಳೆ ಮತ್ತೊಂದು ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ಬಾಲಿವುಡ್ ನಟ ವಿಕ್ಕಿ ಕೌಶಲ್ ಅವರನ್ನು ನಟಿ ಕತ್ರಿನಾ ಕೈಫ್ ಪ್ರೀತಿಸಿ ಮದುವೆ ಆಗಿದ್ದಾರೆ. ಮದುವೆ ಬಳಿಕ ನಟಿ ಕತ್ರಿನಾ ಹೆಚ್ಚಾಗಿ ಸಿನಿಮಾ ಮಾಡಿಲ್ಲ. ಕತ್ರಿನಾ ಸಿನಿಮಾ ಕುರಿತು ಯಾವುದೇ ಅಪ್ಡೇಟ್ ಕೂಡ ಹೊರ ಬಿದ್ದಿಲ್ಲ. ಕತ್ರಿನಾ ಸದ್ಯ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿದ್ದಾರೆ. ಕತ್ರಿನಾ ಕೈಫ್ ತಂದೆ ಮುಸ್ಲಿಂ ಆಗಿದ್ದು, ತಾಯಿ ಕ್ರಶ್ಚಿಯಲ್ ಆಗಿದ್ದಾರೆ. ನಟಿ ಕತ್ರಿನಾ ಕೈಫ್ ಮದುವೆ ಬಳಿಕ ಹಿಂದೂ ದೇಗುಲಗಳಿಗೆ ಹೆಚ್ಚಾಗಿ ಭೇಟಿ ನೀಡ್ತಿದ್ದಾರೆ. ಹಿಂದೂ ದೇವರಲ್ಲಿ ನಂಬಿಕೆ ಹೊಂದಿದ್ದಾರೆ. ಇದೀಗ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಸಂತಾನ ಪ್ರಾಪ್ತಿಗಾಗಿ ಪೂಜೆ ಸಲ್ಲಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕತ್ರಿನಾ ಕೈಫ್! ಸಂತಾನಕ್ಕಾಗಿ ಸರ್ಪ ಸಂಸ್ಕಾರ ಪೂಜೆ ಮಾಡಿದ್ರಾ ಬಾಲಿವುಡ್ ನಟಿ?