
ಮೈಸೂರು: ಎಲ್ಲರೂ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಅದಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಉತ್ತಮ ಆರೋಗ್ಯಕ್ಕೆ ಮುಂಜಾಗ್ರತೆಯೇ ಸಂಜೀವಿನಿ ಎಂದು ಮಾಜಿ ಮೇಯರ್ ಸಂದೇಶ್ ಸ್ವಾಮಿ ಅಭಿಪ್ರಾಯಪಟ್ಟರು.

j3tvkannada
ನಗರದ ಹಳೆ ಕೆಸರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಂದನಾ ಚಾರಿಟಬಲ್ ಟ್ರಸ್ಟ್, ವಿನಾಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಅನ್ನಪೂರ್ಣ ಕಣ್ಣಿನ ಆಸ್ಪತ್ರೆ, ಸಮೃದ್ಧಿ ಟ್ರಸ್ಟ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ರಕ್ತದೊತ್ತಡ, ಮಧುಮೇಹ ಸಾಮಾನ್ಯವಾಗಿದೆ. ಇದಕ್ಕೆ ಒತ್ತಡದ ಜೀವನಶೈಲಿ ಕಾರಣ ಆರೋಗ್ಯದ ಕುರಿತು ಯಾರು ನಿರ್ಲಕ್ಷ್ಯ ವಹಿಸಬೇಡಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಎಂದರು.
ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಹೇಳಿದರು. ಉತ್ತಮ ಜೀವನ ಬಯಸುವವರು ಶುದ್ಧ ಮತ್ತು ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು. ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ಉಚಿತ ಕಣ್ಣಿನ ತಪಾಸಣೆ, ಬಿ.ಪಿ, ಮಧುಮೇಹ, ಇ.ಸಿ.ಜಿ ಮತ್ತು ಸ್ತ್ರೀ ಸಂಬಂಧ ಸಮಸ್ಯೆಗಳ ಸ್ತ್ರೀ ಯೋಗ ತಜ್ಞರಿಂದ ಉಚಿತ ವೈದ್ಯಕೀಯ ತಪಾಸಣೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಂದನಾ ಚಾರಿಟಬಲ್ ಫೌಂಡೇಶನ್ ಅಧ್ಯಕ್ಷೆ ಗೀತಾ, ವೀನಸ್ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಹರಿಣಿ, ಸಮೃದ್ಧಿ ಟ್ರಸ್ಟ್ ಅಧ್ಯಕ್ಷೆ ಸಹನ, ಸಮಾಜ ಸೇವಕಿ ಮಾಲಿನಿ ಪಾಲಾಕ್ಷ, ಚಂದ್ರಿಕಾ ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.