
ವಿಜಯಪುರ: ಈರುಳ್ಳಿ ದರ ಕುಸಿತದಿಂದ ರೈತರು ಆಕ್ರೋಶಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ರೈತ ನಂದಪ್ಪ ಗುಡ್ಡದ, ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಈರುಳ್ಳಿ ದರ ಕ್ವಿಂಟಾಲ್ ಗೆ 200 ರೂಪಾಯಿ ನಿಗದಿಯಾಗಿದ್ದು ಬೆಳೆಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

j3tvkannada
ನಂದಪ್ಪ ಗುಡ್ಡದ ಹಾಗೂ ಮಲ್ಲಿಕಾರ್ಜುನ ಗೋಲಗೊಂಡ ಎಂಬ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಈರುಳ್ಳಿ ಬೆಳೆದಿದ್ದರು. ಇದೀಗ ಈರುಳ್ಳಿ ಬೆಲೆ ಕುಸಿದಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದಾರೆ.
ನಮಗೆ ನ್ಯಾಯ ಕೊಡಿ, ಬೆಳೆಗೆ ಬೆಲೆ ಇಲ್ಲ. ನಷ್ಟ ಅನುಭವಿಸುವಂತಾಗಿದೆ ಎಂದು ರೈತರು ಆಕ್ರೋಶ ಹೊರ ಹಾಕಿದರು. ಜೊತೆಗೆ ದಲ್ಲಾಳಿಗಳ ವಿರುದ್ಧವೂ ಕಿಡಿಕಾರಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದ ಮಲ್ಲಿಕಾರ್ಜುನ ಬೋಲಗೊಂಡ ಎಂಬ ರೈತ ಈರುಳ್ಳಿ ಮೇಲೆ ಹೊರಳಾಡಿದ್ದಾರೆ. ಇದೇ ಈರುಳ್ಳಿ ಬಾಗಲಕೋಟೆಯಲ್ಲಿ ಕ್ವಿಂಟಾಲ್ಗೆ 1000 ರೂಪಾಯಿಗೆ ಮಾರಾಟವಾಗಿತ್ತು. ಡಿ.ಎ.ಪಿ ರಸಗೊಬ್ಬರ 1200 ರೂ, ಯೂರಿಯಾ 300 ರೂ. ಇದೆ. ನಾವು ಕಷ್ಟಪಟ್ಟು ಬೆಳೆದ ಈರುಳ್ಳಿಗೆ ಕೇವಲ 200 ರೂ. ಯಾಕೆಂದು ಪ್ರಶ್ನೆ ಮಾಡಿದ್ದಾರೆ. ಸಿ.ಎಂ ಸಿದ್ದರಾಮಯ್ಯ ಈ ಕುರಿತು ಗಮನ ಹರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.