

j3tvkannada
ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಯರೇಹಂಚಿನಾಳ ಗ್ರಾಮದ ರೈತ ಮಹಿಳೆ ಸವಿತಾ ನಾಗರಡ್ಡಿ ಎಂಬವರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ವಿನಿಯೋಗಿಸಿ ಸಾರ್ವಜನಿಕ ರಸ್ತೆಯನ್ನು ಸ್ವಚ್ಛಗೊಳಿಸಿ ಗಮನ ಸೆಳೆದಿದ್ದಾರೆ.
ಯರೇಹಂಚಿನಾಳದಿಂದ ಕೋಟಮಚಗಿ ಸಂಪರ್ಕಿಸುವ ರಸ್ತೆ ಬದಿ ಬೆಳೆದ ಮುಳ್ಳು ಕಂಟಿಗಳನ್ನು ಜೆ.ಸಿ.ಬಿ ತರಿಸಿ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ರಸ್ತೆಯುದ್ದಕ್ಕೂ ಮುಳ್ಳು ಕಂಟಿಗಳು ಬೆಳೆದಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ತೆರವು ಮಾಡಿಕೊಡಿ ಎಂದು ಸ್ಥಳೀಯಾಡಳಿತಕ್ಕೆ ಅವರು ಮನವಿ ಮಾಡಿದ್ದರು. ಬಹಳ ದಿನಗಳಾದರೂ ಆಡಳಿತ ಕ್ರಮ ಕೈಗೊಳ್ಳದ ಕಾರಣ ತಾವೇ ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಮಹಿಳೆ ಸಮಾಜ ಸೇವೆಯನ್ನು ಮಾಡಿದ್ದಾರೆ.