
ಯಾದಗಿರಿ: ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸಬೇಕು ಎಂದು ಆರಕ್ಷಕ ನಿರೀಕ್ಷಕ ವಿನಯಕುಮಾರ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

j3tvkannada
ಹಬ್ಬಗಳ ಆಚರಣೆ ವೇಳೆ ಯಾವುದೇ ಸಮುದಾಯವಾಗಿರಲಿ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಬಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು ಸಾಮಾಜಿಕ ಜಾಲ ತಾಣಗಳ ಮೂಲಕ ಯಾವುದೇ ವ್ಯಕ್ತಿಯ ಹಾಗೂ ಯಾವುದೇ ಧರ್ಮದ ಜಾತಿ ಸಮಾಜದ ಘನತೆಗೆ ಧಕ್ಕೆ ಬರುವಂತಹ ಸಂದೇಶಗಳನ್ನು ರವಾನಿಸುವುದು , ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದೆ.
ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ. ಹಬ್ಬದ ಆಚರಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕು. ಪೋಷಕರು ತಮ್ಮ ಮಕ್ಕಳ ಚಲನ ವಲನಗಳ ಮೇಲೆ ನಿಗಾವಹಿಸಬೇಕು. ಇದರಿಂದ ನಮ್ಮ ಸಮಾಜದಲ್ಲಿ ಪ್ರತಿಯೊಂದು ಧಾರ್ಮಿಕ ಚಟುವಟಿಕೆಗಳು ಸೌಹಾರ್ದತೆಯಿಂದ ಆಚರಿಸುವ ಮೂಲಕ ಸಹಬಾಳ್ವೆ ಜೀವನ ಸಾಗಿಸುವುದಕ್ಕೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ಪಿ.ಎ.ಸ್ಐ ಅಲ್ಲಭಕ್ಷ, ಎಸ್.ಐ ಚಂದ್ರಕಾಂತ, ಮಾಣಿಕ್ಯಪ್ಪ, ಮೋಹನರೆಡ್ಡಿ, ರಾಜಕುಮಾರ, ಗ್ರಾಮಸ್ಥರಾದ ವೆಂಕಟೇಶ ಗಡದ್, ಚಂದ್ರು ವಾಡಿ, ಅರ್ಜುನ ಚವ್ಹಾಣ, ಪ್ರೇಮ್ ಕದಮ್, ಸಾಗರ ಹುಲ್ಲೇರ್, ಶಿವುಗೌಡ ಸಾವೂರು ಸೇರಿದಂತೆ ಇತರರಿದ್ದರು.