
ವಿಜಯನಗರ: ಹಲವು ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಹಾಲು ಒಕ್ಕೂಟದ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳ ಚುನಾವಣೆಯ ಕಾಲ ಸನ್ನಿ ಹಿತವಾದಂತಾಗಿದೆ. ನಿನ್ನೆ ದಿನ ಕೆ.ಎಂ.ಎಫ್ ಗೆ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದೆ. ಇದೇ ರೀತಿ ಕಳೆದ ಒಂದು ವರ್ಷದಿಂದ ಇಲ್ಲಿನ ರಾಬಾಕೋವಿ ಹಾಲು ಒಕ್ಕೂಟಕ್ಕೂ ಚುನಾವಣೆ ನಡೆದಿಲ್ಲ.

j3tvkannada
ಇದಕ್ಕೂ ಆಡಳಿತಾಧಿಕಾರಿ ನೇಮಕ ಸನ್ನಿಹತವಾದಂತಾಗಿದೆ. ಕೆ.ಎಂ.ಎಫ್ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ರಾಬಾಕೋವಿ ಒಕ್ಕೂಟದ ಅಧ್ಯಕ್ಷರೂ ಆಗಿರುವ ಭೀಮಾನಾಯ್ಕ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಕೃಪಾ ಕಟಾಕ್ಷದಿಂದ ಕೆ.ಎಂ.ಎಫ್ ಅಧ್ಯಕ್ಷರಾದರೂ ಅವಧಿ ಮುಗಿದರೂ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಆಡಳಿತಾಧಿಕಾರಿ ನೇಮಕ ಮಾಡದೆ ಅವಧಿ ಮುಗಿದ ಆಡಳಿತ ಮಂಡಳಿಗೆ ಅಧಿಕಾರ ನೀಡಿ ಮುಂದುವರಿಸಿದ್ದರು.
ಈಗ ಈ ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಇತ್ತೀಚೆಗೆ ಬಮೂಲ್ ಗೆ ನಡೆದ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿದ್ದರಿಂದ ಹಳೇ ಆಡಳಿತಕ್ಕೆ ಕೊಕ್ ನೀಡಿ. ಈ ಹಿಂದೆ ಬಳ್ಳಾರಿಯಲ್ಲಿ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ಹೆಚ್.ಎಂ.ಕುಮಾರ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ.
ಇದೇ ಪರಿಸ್ಥಿತಿಯನ್ನು ಎದುರಿಸುತ್ತಿರುವ ಬಳ್ಳಾರಿ ಕೆ.ಎಂ.ಎಫ್ ಗೂ ಚುನಾವಣೆ ನಡೆಸುವವರೆಗೆ ಆಡಳಿತಾಧಿಕಾರಿ ನೇಮಕಕ್ಕೆ ಈ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಅಲ್ಲದೆ ಒಕ್ಕೂಟದಲ್ಲಿ ತೆಗೆದು ಕೊಳ್ಳಬೇಕಾದ ಪ್ರಮುಖ ಆರ್ಥಿಕ ನಿರ್ಧಾರಗಳಿಗೆ ಆಡಳಿತಾಧಿಕಾರಿಯ ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ಬಳ್ಳಾರಿ ಒಕ್ಕೂಟಕ್ಕೂ ಸದ್ಯದಲ್ಲೇ ಆಡಳಿತಾಧಿಕಾರಿ ನೇಮಕ ಆಗಿಲಿದೆಂದು ಬಲ್ಲ ಮೂಲಗಳು ತಿಳಿಸಿವೆ.