
ವಿಜಯಪುರ: ಸತೀಶ್ ಜಾರಕಿಹೊಳಿ ಶ್ರೀಮಂತರು ಅವರಿಗೆ ಬಡವರ ಕಷ್ಟ ಗೊತ್ತಾಗಲ್ಲ, ಅಂಬೇಡ್ಕರ್ ತತ್ವ ಹೇಳಿಕೊಂಡ್ರೆ ಸಾಲದು, ಬಡವರ ಕಷ್ಟ ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

j3tvkannada
ಆಲಮಟ್ಟಿ ಡ್ಯಾಂ ಎತ್ತರ ಮಾಡುವುದರಿಂದ ಯಾವುದೇ ಸಮಸ್ಯೆ ಆಗಲ್ಲ, ಮಹಾರಾಷ್ಟ್ರದ ಪ್ರಕಾರ ಕೆಲ ಗ್ರಾಮಗಳಲ್ಲಿ ನೀರು ನಿಲ್ಲಲಿದೆ, ಅದನ್ನ ಬಿಟ್ರೆ ಸಾಂಗ್ಲಿ, ಕೊಲ್ಹಾಪುರಕ್ಕೆ ಯಾವುದೆ ತೊಂದರೆ ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದವರು ಉದ್ದೇಶಪೂರ್ವಕವಾಗಿ ಪ್ರಚೋದನೆ ಮಾಡಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ, ಕಾರಣ ಕೇಂದ್ರ ಸರಕಾರ ಕರ್ನಾಟಕಕ್ಕೆ ಅನ್ಯಾಯ ಆಗದ ರೀತಿಯಲ್ಲಿ ಎರಡು ರಾಜ್ಯಗಳ ಸಿ.ಎಂಗಳ ಸಭೆ ಕರೆಯಬೇಕು, ನೀರಾವರಿ ತಜ್ಞರನ್ನು ಕರೆದು ಎಷ್ಟು ಮುಳುಗಡೆ ಅಗುತ್ತೆ ಅಂತಾ ಸಿ.ಎಂಗೆ ತಿಳಿ ಹೇಳಬೇಕು, ನಮ್ಮ ರಾಜ್ಯಕ್ಕೆ ಯಾವುದೆ ತೊಂದರೆ ಆಗಬಾರದು ಎಂದು ಹೇಳಿದರು.
ಯಾವುದೇ ಸರಕಾರ ಇದ್ರೂ ನಾವು ಹೋರಾಟ ಮಾಡಬೇಕು, ಮಹಾರಾಷ್ಟ್ರದಲ್ಲಿ ಬರೀ ಅದೇ ಉದ್ಯೋಗ ಆಗಿ ಬಿಟ್ಟಿದೆ, ಕೇವಲ ಕನ್ನಡ, ಮರಾಠಿ ಎಂದು ಜಗಳ ಹಚ್ಚೊದೇ ಅವರ ಕೆಲಸ ಆಗಿದೆ, ಭಾಷಾ ಜಗಳ ಹಚ್ಚೋದು,ನೀರಿನ ಜಗಳ ಹಚ್ಚೋದು ಶಾಶ್ವತ ಅಲ್ಲ, ಹಿನ್ನೀರು ನಿಲ್ಲೋದ್ರಿಂದ ಅವರಿಗೂ ನೀರಾವರಿಗೆ ಅನುಕೂಲ ಆಗುತ್ತೆ, ಸುಮ್ಮನೆ ಏನಾದ್ರೂ ಮಾಡಿ ಆಲಮಟ್ಟಿ ಎತ್ತರಕ್ಕೆ ಅಡ್ಡಿ ಮಾಡಬೇಕು ಅಂತಾ ವ್ಯವಸ್ಥಿತವಾಗಿ ಪಿತೂರಿ ಮಾಡುತ್ತಿದ್ದಾರೆ ಎಂದು ಹೇಳಿದರು. ಗ್ಯಾರಂಟಿಗಳನ್ನ ಕೊಡುವ ಬದಲು ನೀರಿನ ಉಪಯೋಗ ಮಾಡಿ ಇವರ ಗ್ಯಾರಂಟಿಗಳು ಯಾರಿಗೂ ಬೇಡ, ರಾಜ್ಯದ ಎಲ್ಲಾ ಸಂಸದರು ಧ್ಚನಿ ಎತ್ತಬೇಕು ಎಂದು ಆಗ್ರಹಿಸಿದರು.