
ಕೊಡಗು(ಕುಶಾಲನಗರ): ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಹರಿ ಬಿಡಲಾಗುತ್ತಿದ್ದು, ಕಾವೇರಿ ಹಾಗೂ ಹಾರಂಗಿ ನದಿ ತಟದ ಎರಡೂ ದಂಡೆಯ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನೀರಾವರಿ ಇಲಾಖೆ ಪ್ರಕಟಣೆ ಹೊರಡಿಸಿದೆ. ಮುಂದಿನ ದಿನಗಳಲ್ಲಿ ಜಲಾನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಎಮರ್ಜೆನ್ಸಿ ಗೇಟ್ (ಎಸ್ಕೇಪ್ ಗೇಟ್) ಮೂಲಕ ಅಣೆಕಟ್ಟೆಯಿಂದ ಪ್ರತಿದಿನ 1 ಸಾವಿರ ಕ್ಯೂಸೆಕ್ ಪ್ರಮಾಣದ ನೀರನ್ನು ಹರಿ ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

j3tvkannada
2,859 ಅಡಿ ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಇದೀಗ 2,851 ಅಡಿ ನೀರು ಶೇಖರಣೆಯಿದೆ. 7 ಅಡಿಗಳ ಅಂತರ ಕಾಯ್ದುಕೊಂಡು ನೀರನ್ನು ಹರಿಬಿಡಲಾಗುತ್ತಿದೆ. ಅಣೆಕಟ್ಟೆಯೂ ಬಹುತೇಕ ಭರ್ತಿಯಾಗಿದೆ. ಹವಾಮಾನ ಇಲಾಖೆ ಸೂಚನೆಯಂತೆ ಮುಂಬರುವ ದಿನಗಳಲ್ಲಿ ಅತಿವೃಷ್ಟಿ ಕಾರಣ ಅಣೆಕಟ್ಟೆಗೆ ಒಳಹರಿವಿನ ಪ್ರಮಾಣ ಹೆಚ್ಚಾಗುವುದರಿಂದ ಹೆಚ್ಚುವರಿ ನೀರನ್ನು ನದಿ ಹರಿಸಲಾಗುವುದು. ಹೀಗಾಗಿ ಉಂಟಾಗಬಹುದಾದ ಸಂಭಾವ್ಯ ಪ್ರವಾಹ ಪರಿಸ್ಥಿತಿ ಬಗ್ಗೆ ಕಾವೇರಿ ಹಾಗೂ ಹಾರಂಗಿ ನದಿ ತಟದ ನಿವಾಸಿಗಳು ತಮ್ಮ ಆಸ್ತಿ ಪಾಸ್ತಿ, ಜನ ಜಾನುವಾರುಗಳ ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಮನವಿ ಮಾಡಿದೆ.

j3tvkannada
ರಾಜ್ಯದಾದ್ಯಂತ ಅಲ್ಲಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜಲಾಶಯಗಳ ಒಳಹರಿವು ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯ ( 27.167 ಟಿಎಂಸಿ), ಕೊಡಗಿನಲ್ಲಿರುವ ಹಾರಂಗಿ ಜಲಾಶಯ (6.046 ಟಿಎಂಸಿ), ಹಾಸನದ ಹೇಮಾವತಿ ಜಲಾಶಯ (23.802 ಟಿಎಂಸಿ), ಮೈಸೂರಿನಲ್ಲಿರುವ ಕಬಿನಿ (17.44 ಟಿಎಂಸಿ) ಸೇರಿದಂತೆ ಅನೇಕ ಜಲಾಶಯಗಳಲ್ಲಿ ನೀರಿನ ಒಳಹರಿವು ಏರಿಕೆಯಾಗಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಮೈಸೂರು, ಚಾಮರಾಜನಗರ, ಹಾಸನ ಸೇರಿದಂತೆ ಇನ್ನಿತರ ಭಾಗಗಳಲ್ಲಿಉತ್ತಮ ಮಳೆಯಾಗುತ್ತಿದೆ. ಮುಂದಿನ ಒಂದು ವಾರವೂ ಇದೇ ರೀತಿಯ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯದ ಪರ ವಾದ ಮಂಡಿಸುತ್ತಿರುವ ಹಿರಿಯ ನ್ಯಾಯವಾದಿ ಮೋಹನ್ ಕಾತರಕಿ ನೇತೃತ್ವದ ತಂಡ ಜಿಲ್ಲೆಯ ಹಿಪ್ಪರಗಿ ಬ್ಯಾರೇಜ್ಗೆ ಭೇಟಿ ನೀಡಿತು. ಬೆಂಗಳೂರಿನಿಂದ ಆಗಮಿಸಿದ ಹಿರಿಯ ನ್ಯಾಯವಾದಿ ಮೋಹನ್ ಕಾತರಕಿ ಜಲಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯದರ್ಶಿ ಅನಿಲಕುಮಾರ್, ವಿ.ಎನ್.ರಘುಪತಿ, ಎಂ.ಎಸ್.ಮೋಹನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ ಹಿಪ್ಪರಗಿ ಬ್ಯಾರೇಜ್, ಆಲಮಟ್ಟಿ ಡ್ಯಾಂನ ನೀರು ಸಂಗ್ರಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.