
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಜನನಿಬಿಡ ಪ್ರದೇಶದಲ್ಲಿ ಕಲ್ಲಿನಿಂದ ಓರ್ವ ಯುವಕನ ಮುಖವನ್ನು ಜಜ್ಜಿ ಮತ್ತು ಮರ್ಮಾಂಗಕ್ಕೆ ಒದ್ದು ಹತ್ಯೆ ಮಾಡಿರುವಂತಹ ಭೀಕರ ಘಟನೆ ನಡೆದಿದೆ.

j3tvkannada
ನಗರದ ಬಿ.ಬಿ.ರಸ್ತೆಯಲ್ಲಿರುವ ಸುಮ ಆಗ್ರೋ ಸೀಡ್ಸ್ ಅಂಗಡಿ ಮುಂಭಾಗದ ಅಂಡರ್ ಗ್ರೌಂಡ್ನಲ್ಲಿ ಓರ್ವ ಯುವಕನ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು, ಶವದ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ನಗರದ ನಿವಾಸಿ ಶ್ರೀಕಾಂತ್ (29) ಎಂದು ಗುರುತಿಸಲಾಗಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ಶ್ರೀಕಾಂತ್, ಪತ್ನಿ ಭಾರ್ಗವಿ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದನಂತೆ. ಇದರಿಂದ ಬೇಸರಗೊಂಡು ಶ್ರೀಕಾಂತ್ ರಾತ್ರಿ ಸಮಯದಲ್ಲಿ ಮನೆಯಿಂದ ಹೊರ ಹೋಗಿ ನೆನ್ನೆ ಶವವಾಗಿ ಪತ್ತೆಯಾಗಿದ್ದಾನೆ. ಮೃತನ ತಾಯಿ ಮೀನಾಕ್ಷಮ್ಮ ಸೊಸೆ ಹಾಗೂ ಮಗನ ನಡುವೆ ಕೌಟುಂಬಿಕ ಕಲಹವಿದ್ದು, ಯಾರು ಕೊಲೆ ಮಾಡಿದ್ದಾರೆ, ಏಕೆ ಕೊಲೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲವೆಂದು ಅಳಲು ತೋಡಿಕೊಂಡಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆರೋಪಿಗಳ ಬಗ್ಗೆ ಸಿ.ಸಿ ಕ್ಯಾಮೆರಾದಲ್ಲಿ ಸುಳಿವು ಸಿಕ್ಕಿದೆ. ಕೊಲೆ ನಡೆದ ಸ್ಥಳದಲ್ಲಿ ಓರ್ವ ಮಹಿಳೆ ಹಾಗೂ ಪುರುಷ ಬಂದು-ಹೋಗಿರುವ ದೃಶ್ಯ ಸೆರೆಯಾಗಿದೆ. ಆರೋಪಿಗಳ ಬಂಧನದ ನಂತರ ಕೊಲೆಯ ರಹಸ್ಯ ಬಯಲಾಗಲಿದೆ.