
ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಡ್ರೋಣ್ ಗಳನ್ನು ಬಳಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಡ್ರೋಣ್ ಬಳಕೆಯನ್ನು ಪ್ರಮುಖವಾಗಿ ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ಸ್ಥಾವರಗಳ ಸುತ್ತಮುತ್ತ ವಿಶೇಷವಾಗಿ ನಿರ್ಬಂಧಿಸಲಾಗಿದೆ.
ಜಿಲ್ಲೆಯ ಎಲ್ಲ ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ಭದ್ರತೆ ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಸಂಸ್ಥೆಗಳು, ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಡ್ರೋಣ್ಗಳನ್ನು ಹಾರಿ ಬಿಡುವುದು ಮತ್ತು ಬಳಕೆ ಮಾಡಬಾರದೆಂದು ಅವರು ಹೇಳಿದ್ದಾರೆ.

j3tvkannada
ಭಾರತ, ಪಾಕ್ ಗಡಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮತ್ತು ಭದ್ರತಾ ಪಡೆಗಳ ಅನಿಯಂತ್ರಿತ ಮತ್ತು ಗುರುತಿಸಲಾಗದ ಡ್ರೋಣ್ ಚಟುವಟಿಕೆಯ ಬಗ್ಗೆ, ವಿಶೇಷವಾಗಿ ಸೂಕ್ಷ್ಮ ಮಿಲಿಟರಿ ಮತ್ತು ಪ್ರಮುಖ ಸ್ಥಾವರಗಳ ಬಳಿ ಬಂದರುಗಳು, ವಿದ್ಯುತ್ ಸ್ಥಾವರಗಳು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ತೈಲ ಡಂಪ್ಗಳು ಮತ್ತು ಸಾರ್ವಜನಿಕರ ಸ್ಥಾವರಗಳು ಭದ್ರತಾ ಕಾಳಜಿಗಳನ್ನು ಗಮನದಲ್ಲಿಟ್ಟು ಕೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಈ ಬಗ್ಗೆ ಮಾಹಿತಿ ನೀಡಿರುವುದಾಗಿ ರಾಜ್ಯದ ಗೃಹ ಇಲಾಖೆ (ಕಾನೂನು ಸುವ್ಯವಸ್ಥೆ) ಕಾರ್ಯದರ್ಶಿ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವುದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ.