
ಕಲಬುರಗಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಟ್ಟು ಹೋಗುತ್ತಿದೆ. ಆದರೆ ಸರ್ಕಾರ ಯಾವುದೇ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗದೇ ಇರುವುದು ಖಂಡನಿಯ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಜನರ ರಕ್ಷಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ನೈತಿಕ ಹೊಣೆ ಹೊತ್ತು, ಗೃಹಮಂತ್ರಿ ಡಾ. ಜಿ. ಪರಮೇಶ್ವರ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿಯ ಓಬಿಸಿ ಮೋರ್ಚಾ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ಅವರು ಒತ್ತಾಯಿಸಿದ್ದಾರೆ.

j3tvkannada
ಆರ್.ಸಿ.ಬಿ ಐ.ಪಿ.ಲ್ ಕಪ್ ಗೆದ್ದ ತಕ್ಷಣ ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಎಲ್ಲೆಡೆ ಸಂಭ್ರಮಾಚರಣೆ ಮಾಡಲಾಯಿತು. ಇದು ಕನ್ನಡಿಗರಲ್ಲಿ ಆರ್.ಸಿ.ಬಿ ತಂಡಕ್ಕೆ ಇರುವ ಅಭಿಮಾನವನ್ನು ಕಾಣಿಸಿತು. ಚಿನ್ನಸ್ವಾಮಿ ಕ್ರೀಡಾಂಗಣದ ದುರ್ಘಟನೆ ತಡೆಯಲು ಪೊಲೀಸರು ಚಿಂತನೆ ,ಮುಂದಾಲೋಚನೆ ಮಾಡಬೇಕಾಗಿತ್ತು. ಅಭಿಮಾನಿಗಳ ಹರ್ಷ ಕಂಡರೆ ಯಾವ ಹಂತಕ್ಕೆ ಪರಿಸ್ಥಿತಿ ಹೋಗುತ್ತದೆ ಎನ್ನುವುದಕ್ಕೆ ಬೆಂಗಳೂರು ನಗರದಲ್ಲಿ ಚಾಕು ಇರಿತ, ಹೃದಯಘಾತದಂತ ಘಟನೆಗಳು ನಡೆದು ಹೋಗಿದ್ದು, ಇಲ್ಲಿ ಪೊಲೀಸರು ಜನರ ರಕ್ಷಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ.
ಕರ್ನಾಟಕ ಕ್ರಿಕೆಟ್ ಸಂಸ್ಥೆಯು ತರಾತುರಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವುದು ತಪ್ಪು ಆಗಿದೆ. ಅಲ್ಲದೇ ಅಭಿಮಾನಿಗಳನ್ನು ನಿಯಂತ್ರಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡದೇ ಇರುವುದು ಗೃಹಮಂತ್ರಿಗಳು ನೇರ ಹೊಣೆಯಾಗಿದ್ದಾರೆ. ಇನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು ಶಾಸಕರು, ತಮ್ಮ ಕುಟುಂಬದ ಸದಸ್ಯರನ್ನು ಆರ್ ಸಿ ಬಿ ತಂಡಕ್ಕೆ ಪರಿಚಯಿಸಿ ಸಂತೋಷ ಪಡುವುದರಲ್ಲಿಯೇ ಇದ್ದರು. ಆದರೆ ಸಾಮಾನ್ಯ ಜನರ ರಕ್ಷಣೆ ಮಾಡುವುದರಲ್ಲಿ ವಿಫಲವಾಗಿದ್ದಾರೆ ಎನ್ನವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸಾಮಾನ್ಯ ಮಾಹಿತಿಯಂತೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ತಮ್ಮ ಕರ್ತವ್ಯ ಮರೆತು ಆರ್.ಸಿ.ಬಿ ತಂಡದೊಂದಿಗೆ ಪೋಟೋ ತೆಗೆಸಿಕೊಳ್ಳುವುದಕ್ಕೆ ಮತ್ತು ಆಟಗಾರರನ್ನು ಕಣ್ತುಂಬಿಸಿಕೊಳ್ಳುವುದಕ್ಕೆ ಹೆಣಗಾಡಿದ್ದಾರೆ ಎಂಬ ಮಾಹಿತಿಗಳು ಕೇಳಿ ಬಂದಿವೆ.
ಅತೀ ಹೆಚ್ಚು ಯುವಕರು, ಯುವತಿಯರು ಚಿನ್ನಸ್ವಾಮಿ ಕ್ರಿಡಾಂಗಣಕ್ಕೆ ಧಾವಿಸಿದ್ದರು. ಗೆಲವಿನ ದಿನದಂದು ಆದ ಘಟನೆಗಳನ್ನು ಅರಿತು. ಗೃಹಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಎಚ್ಚತ್ತು ಕೊಳ್ಳದೇ ಇರುವುದು ಈ ಘಟನೆಗೆ ಕಾರಣವಾಗಿದೆ. ಕೂಡಲೇ ಸಿಎಂ. ಸಿದ್ದರಾಮಯ್ಯ ಗೃಹಮಂತ್ರಿಗಳ ಬದಲಾಣೆ ಮಾಡಬೇಕು. ಡಾ. ಜಿ. ಪರಮೇಶ್ವರ ಅವರೇ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು ಎಂದು ಬಿ.ಜೆ.ಪಿಯ ಓ.ಬಿ.ಸಿ ಮೋರ್ಚಾದ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ಒತ್ತಾಯಿಸಿದ್ದಾರೆ.