
ಕಲಬುರಗಿ: ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಫಿರೋಜಾಬಾದ ಬಳಿ ಜರುಗಿದೆ. ನಿಜಾಮುದ್ದೀನ್ ಬಾವರಚಿ ಅಲಿಯಾಸ್ ನಜ್ಜು (45) ಮೃತ ವ್ಯಕ್ತಿಯಾಗಿದ್ದು, ಹಳೆ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

j3tvkannada
ಕಲಬುರಗಿಯ ಕಿಂಗ್ ಪ್ಯಾಲೆಸ್ ಹಾಲ್ ಹತ್ತಿರದ ನಿವಾಸಿಯಾದ ನಿಜಾಮುದ್ದೀನ್, ಕಳೆದ ಕೆಲ ದಿನಗಳ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ, ಬಿಡುಗಡೆಯಾಗಿ ಹೊರ ಬಂದಿದ್ದನು ಎಂದು ತಿಳಿದು ಬಂದಿದೆ. ಈ ಕುರಿತು ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.