
ಹಾವೇರಿ:ಜಿಲ್ಲೆಯ ಹಲವಾರು ಕಡೆಗಳಲ್ಲಿ ವಿಶ್ವ ಪರಿಸರ ದಿನವನ್ನು ಗುರುವಾರದಂದು ಆಚರಿಸಲಾಗಿದೆ. ಶಾಲಾ ಕಾಲೇಜು ಹಾಗೂ ಇತರೆಡೆಗಳಲ್ಲಿ ಸಸಿಗಳನ್ನು ನೆಟ್ಟು ವನಮಹೋತ್ಸವವನ್ನು ಆಚರಿಸಿದರು.

j3tvkannada.in
ಜಿಲ್ಲಾಡಳಿತ ಮತ್ತು ಪರಿಸರ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಪ್ರಮುಖ ಶಾಲೆ ಕಾಲೇಜುಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಸಿಗಳನ್ನು ನೆಟ್ಟು ಯುವ ಜನತೆಯಲ್ಲಿ ಪರಿಸರದ ಬಗ್ಗೆ ಕಾಳಜಿ ಮತ್ತು ಜಾಗೃತಿಯನ್ನು ಮೂಡಿಸಲು ಪ್ರಯತ್ನಿಸಲಾಗಿದೆ
ಕಬ್ಬೂರ ಗ್ರಾಮದ ಪಿ ಎಂ ಶ್ರೀ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಕೈ ತೋಟವನ್ನು ಜಿ.ಪಂ. ಸಿ. ಇ. ಒ ರುಚಿ ಬಿಂದಲ್ ಅವರು ಉದ್ಘಾಟಿಸಿದರು. ಹಾವೇರಿ ರಾಣೆಬೆನ್ನೂರು, ಬ್ಯಾಡಗಿ, ಹಿರೇಕೆರೂರು, ಶಿಗ್ಗಾವಿ ಸವಣೂರು, ರಟ್ಟೀಹಳ್ಳಿ ಹಾಗೂ ಹಾನಗಲ್ ತಾಲೂಕಿನಲ್ಲಿ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷ ಕರಬಸಪ್ಪ ಹೊಸಳ್ಳಿ, ಶಿವಣ್ಣ ತೋಟದ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಎಚ್ ಪಾಟೀಲ ಅವರು ಹಾಜರಿದ್ದರು. ಹಾವೇರಿಯ ಹಾಲು ಒಕ್ಕೂಟದ ವತಿಯಿಂದ ಜಂಗಮನ ಕೊಪ್ಪದಲ್ಲಿರುವ ಯು ಎಚ್ ಟಿ ಘಟಕದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ನಿರ್ದೇಶಕರಾದ ಶ್ರೀಚಂದ್ರಪ್ಪ ಜಾಲಗಾರ, ಬಸವೇಶ್ವರ ಗೌಡ ಪಾಟೀಲ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.