
ಮಂಡ್ಯ (ಮದ್ದೂರು); ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಆಲಭುಜನಹಳ್ಳಿಯ ಚೇತನ್ (14) ಹಾಗೂ ದರ್ಶನ್ (15) ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ.

j3tvkannada.in
ಸಕ್ಕರೆನಾಡು ಮಂಡ್ಯದಲ್ಲಿ ಭಾನುವಾರ ಬೆಳ್ಳಂ ಬೆಳಗ್ಗೆ ಘೋರ ದುರಂತ ಸಂಭವಿಸಿದೆ. ಕೆ.ಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕೆಲವು ದಿನಗಳ ಹಿಂದೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದಲ್ಲಿ ಆಟವಾಡಲು ಹೋಗಿದ್ದ ಮೂವರು ಯುವತಿಯರು ಮೃತಪಟ್ಟಿದ್ದು, ಈ ವೇಳೆ ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿತ್ತು.
ಮುಂಗಾರು ಮುಂಚಿತ ಮಳೆ ಜೋರಾದ ಹಿನ್ನಲೆ ಕೆರೆ ಹಳ್ಳ ಕೊಳ್ಳಗಳಲ್ಲಿ ನೀರು ಹೆಚ್ಚಾಗಿಯೇ ತುಂಬಿಕೊಂಡಿದ್ದು ಮಕ್ಕಳು ನೀರಿನಲ್ಲಿ ಆಟವಾಡಲು ಹೋಗುವ ವೇಳೆ ಗೊತ್ತಾಗದೆ, ರಾಜ್ಯಾದ್ಯಂತ ಹಲವಾರು ಕಡೆ ನೀರಲ್ಲಿ ಮುಳುಗಿ ಸಾವನ್ನಪ್ಪುವುದು ಸಾಮಾನ್ಯವಾಗಿ ಹೋಗಿದೆ. ಆದ್ದರಿಂದ ಪೋಷಕರು ಎಚ್ಚರದಿಂದ ಇದ್ದು ಮಕ್ಕಳಿಗೆ ತಿಳಿ ಹೇಳಬೇಕಾಗಿದೆ.