
ಚಿಕ್ಕಮಗಳೂರು: 33 ರ ಯುವಕನಿಗೆ 55ರ ಆಂಟಿಯ ಜೊತೆಗಿದ್ದ ಅಕ್ರಮ ಸಂಬಂಧದ ಹಿನ್ನೆಲೆ ಆಕೆ ಗಂಡನನ್ನ ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ ಪ್ರೇಮಿ ಸೇರಿ ಮೂವರನ್ನ ಪೊಲೀಸರು ಹೆಡೆಮುರಿ ಕಟ್ಟಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ನಡೆದಿದೆ.

j3tvkannada
ಮೃತನನ್ನ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಕಳೆದೊಂದು ವಾರದ ಹಿಂದೆ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ಅನಾಮಧೇಯ ವ್ಯಕ್ತಿಯ ಸುಟ್ಟು ಕರಕಲಾಗಿದ್ದ ದೇಹದ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ನಾಪತ್ತೆ ಪ್ರಕರಣ ಅನಾಮಧೇಯ ವ್ಯಕ್ತಿಯ ಮೃತದೇಹದ ಪ್ರಕರಣದ ಬೆನ್ನೆತ್ತಿದ್ದ ಕಡೂರು ಪೊಲೀಸರಿಗೆ ರೋಚಕ ತಿರುವು ಸಿಕ್ಕಿತ್ತು.
33 ರ ಯುವಕನಿಗೆ 55ರ ಆಂಟಿ ಜೊತೆಗಿದ್ದ ಅಕ್ರಮ ಸಂಬಂಧಕ್ಕಾಗಿ ಆಕೆಯ ಪತಿಯನ್ನೇ ಯುವಕ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ. ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್ನಿಂದ ಸುಟ್ಟು ತಲೆಮರೆಸಿಕೊಂಡಿದ್ದ 3 ಜನ ಆರೋಪಿಗಳು ಕಡೂರು ಪೊಲೀಸರ ಅತಿಥಿಯಾಗಿದ್ದಾರೆ.
ಕಡೂರು ಪಟ್ಟಣದ ನಿವಾಸಿ ಮೀನಾಕ್ಷಮ್ಮ ಎಂಬುವರು ಠಾಣೆಗೆ ಹಾಜರಾಗಿ ತನ್ನ ಗಂಡ ಸುಬ್ರಹ್ಮಣ್ಯ ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಪೊಲೀಸರು ತನಿಖೆಯನ್ನ ತೀವ್ರ ಗೊಳಿಸಿದ್ದರು. ಕೊಲೆಯಾದ ವ್ಯಕ್ತಿಯ ಗುರುತು ಹಾಗೂ ಕೊಲೆ ಆರೋಪಿಗಳ ಪತ್ತೆ ಹಾಗೂ ಕಾಣೆಯಾದ ಸುಬ್ರಹ್ಮಣ್ಯರವರ ಪತ್ತೆ ಸಂಬಂಧ ಕಡೂರು ಪೊಲೀಸ್ ಠಾಣಾ ಪಿ.ಎಸ್.ಐ ಹಾಗೂ ಸಿಬ್ಬಂದಿಯನ್ನೊಳಗೊಂಡ 2 ಪ್ರತ್ಯೇಕ ತಂಡ ನೇಮಕ ಮಾಡಲಾಗಿತ್ತು.
ಎರಡೂ ಪ್ರಕರಣಗಳ ಸಂಬಂಧ ತನಿಖೆ ವೇಳೆ ತಾಂತ್ರಿಕ ಹಾಗೂ ವಿವಿಧ ಆಯಾಮಗಳ ತನಿಖೆಯಲ್ಲಿ ಕಾಣೆಯಾದ ಹಾಗೂ ಕೊಲೆಯಾದ ವ್ಯಕ್ತಿ ಒಬ್ಬನೇ ಅನ್ನೋದು ಪೊಲೀಸರಿಗೆ ಖಚಿತವಾಗಿತ್ತು. ತನಿಖೆ ಮುಂದುವರಿದು ಕಡೂರು ಪಟ್ಟಣದ ಪ್ಲೇಗಿನಮ್ಮ ದೇವಸ್ಥಾನದ ಹತ್ತಿರದ ವಾಸಿ ಪ್ರದೀಪ್ ಆಚಾರ್, ಸಿದ್ದೇಶ್ ಹಾಗೂ ವಿಶ್ವಾಸ್ ರನ್ನು ವಶಕ್ಕೆ ಪಡೆದು ಕೂಲಂಕಶವಾಗಿ ವಿಚಾರಣೆಗೊಳಪಡಿಸಿದಾಗ ಕೊಲೆಗೆ ಖಚಿತ ಕಾರಣ ತಿಳಿದು ಬಂದಿದೆ.
ಮೊದಲನೇ ಆರೋಪಿ ಪ್ರದೀಪ್ಗೂ ಕೊಲೆಯಾದ ವ್ಯಕ್ತಿಯ ಹೆಂಡತಿಗೂ ಅಕ್ರಮ ಸಂಬಂಧವಿತ್ತು. ಈ ವಿಚಾರದಲ್ಲಿ ಕೊಲೆಯಾದ ವ್ಯಕ್ತಿ ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸುತ್ತಿದ್ದ ಎಂದು ಪ್ರದೀಪ್ ಸ್ನೇಹಿತರಿಗೆ ಹಣದ ಆಮೀಷವೊಡ್ಡಿ ಅವರ ಸಹಾಯ ಪಡೆದು ಕಂಸಾಗರ ಗೇಟ್ ಬಳಿ ಮಾರುತಿ ಓಮಿನಿ ಕಾರಿನಲ್ಲಿ ಸುಬ್ರಹ್ಮಣ್ಯ ಅವರನ್ನ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ನಂತರ ಶವವನ್ನು ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್ಟುಹಾಕಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ. 3 ಜನ ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಮಾರುತಿ ಓಮಿನಿ ಕಾರನ್ನು ವಶಕ್ಕೆ ಪಡೆದಿದ್ದಾರೆ.