
ಬೀದರ್: ನಗರದ ಹೊರವಯದಲ್ಲಿರುವ ಲಿಂಗರಾಜಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ದಿನ (ಗ್ರಾಜುಯೇಷನ್ ಡೇ) ಕಾರ್ಯಕ್ರಮವ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೆವೆಂತ್ ಸೆನ್ಸ್ ಟ್ಯಾಲೆಂಟ್ ಸೊಲ್ಯೂಷನ್ ರಿಜನಲ್ ಮ್ಯಾನೇಜರ್ ಆದ ಮಿಸ್ಟರ್ ಕೊಟ್ರೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮುಂದೆ ಬರುವ ತಂತ್ರಜ್ಞಾನದ ಬಗ್ಗೆ ಗಮನ ಹರಿಸಬೇಕೆಂದು ಕರೆ ನೀಡಿದರು.

j3tvkannada
ಗೌರವ ಅತಿಥಿಯಾಗಿ ದೇವಪ್ಪ ಚಾಂಬೋಳೆ ಮಾತನಾಡಿ ವಿದ್ಯಾರ್ಥಿಗಳು ಪ್ರಾಮಾಣಿಕತೆ ಉತ್ತಮ ಸಂಸ್ಕಂತಿಯನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ನಿರ್ದೇಶಕರಾದ ಡಾ. ಉಮಾತಾಯಿ ದೇಶಮುಖ ಅವರು, ಶರಣ ಬಸವೇಶ್ವರ ಸಂಸ್ಥೆಯ ಜ್ಞಾನದ ಬಾಗಿಲು ಬಡ ವಿದ್ಯಾರ್ಥಿಗಳ ಸೇವೆಗೆ ಸದಾ ಸಿದ್ಧವಾಗಿದೆ ಎಂದು ಕರೆ ನೀಡಿದರು. ಗೌರವ ಅತಿಥಿಯಾಗಿ ಶರಣಬಸವೇಶ್ವರ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಸತೀಶ್ ಪ್ರತಾಪುರ ಅವರು ಮಾತನಾಡಿ, ಜೀವನದ ಪ್ರತಿ ಹಂತದಲ್ಲಿ ಸ್ಪರ್ಧೆ ಇರುತ್ತದೆ. ವಿದ್ಯಾರ್ಥಿಗಳು ಇದನ್ನು ಮೆಟ್ಟಿ ನಿಲ್ಲಬೇಕು ಎಂದು ಹೇಳಿದರು.
ಪ್ರಾಂಶುಪಾಲರಾದ ಡಾಕ್ಟರ್ ವಿನಿತಾ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಜೀವನದಲ್ಲಿ ಮುಂದೆ ಬರಬೇಕೆಂದು ಕರೆ ನೀಡಿದರು. ಗುಣಮಟ್ಟದ ಶಿಕ್ಷಣದಿಂದ ಕಾಲೇಜು ಜಿಲ್ಲೆಯಲ್ಲಿ ಹೆಸರು ಮಾಡಿದೆ. ಕಾಲೇಜಿಗೆ ಪಾಲಕರ ಸಹಕಾರ ನಿರಂತರ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ, ಐದು ವಿಭಾಗಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಪಾಸಾದ ಪ್ರಥಮ, ದ್ವಿತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪದವಿ ಪ್ರಮಾಣ ಪತ್ರವನ್ನು ವಿತರಿಸಿದರು. ಕಾರ್ಯಕ್ರಮವನ್ನು ಸಹನಾ ಪಾಟೀಲ ನಿರೂಪಿಸಿದರು. ವಿಜಯಾನಂದ ಕಪ್ಟೆ ಸ್ವಾಗತಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲಕರು ಪಾಲ್ಗೊಂಡಿದ್ದರು.