
ಮೈಸೂರು: ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿಯಾಗಿ ಐದು ಪ್ಲಾಟ್ ಫಾರಂಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿ

j3tvkannada.in
ನಗರದ ರೈಲ್ವೆ ಡಿಆರ್ಎಂ ಕಚೇರಿಯಲ್ಲಿ ಮೈಸೂರು ವಿಭಾಗೀಯ ರೈಲ್ವೆ ಪ್ರಬಂಧಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು 439 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಸಬ್ ವೇ, ಸ್ಕೈವಾಕ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತಿದೆ. ರೈಲ್ವೆ ಸಿಬ್ಬಂದಿ ಅನುಕೂಲಕ್ಕಾಗಿ ವಸತಿ ಗೃಹವನ್ನೂ ನಿರ್ಮಾಣ ಮಾಡಲಾಗುತ್ತಿದೆ, ಎಂದು ಮಾಹಿತಿ ನೀಡಿದರು.
ರೈಲ್ವೆ ಇಲಾಖೆಯ ಎಲ್ಲಾ ಕಾಮಗಾರಿಗಳು ತ್ವರಿತವಾಗಿ ನಡೆಯಬೇಕು. ಕ್ವಾಟ್ರರ್ಸ್ಗೆ ಪ್ರಧಾನ ಮಂತ್ರಿಗಳು ಚಾಲನೆ ನೀಡಿದ್ದು, ಭೂ ಸ್ವಾಧೀನದ ವಿಚಾರವಿದ್ದರೆ ಸರಕಾರದೊಂದಿಗೆ ಮಾತನಾಡುತ್ತೇನೆ. ರೈಲ್ವೆ ಇಲಾಖೆಗೆ ಯಾರೂ ಅನಿವಾರ್ಯವಲ್ಲ. ಆದರೆ ರೈಲ್ವೆ ಇಲಾಖೆ ಎಲ್ಲರಿಗೂ ಅನಿವಾರ್ಯ. ಸೌಜನ್ಯದಿಂದ ವರ್ತಿಸಿ, ಗೌರವಕೊಟ್ಟು ಮಾತನಾಡಿ. ಇಲ್ಲದಿದ್ದರೆ ಹುಬ್ಬಳ್ಳಿ ಅಲ್ಲ, ಕಾಶ್ಮೀರಕ್ಕೆ ಕಳುಹಿಸುತ್ತೇನೆ, ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮೈಸೂರು-ಚಾಮರಾಜನಗರದ ಎಲೆಕ್ಟ್ರಿಕಲ್ ಮಾರ್ಗದ ಕಾಮಗಾರಿ ಕುಂಠಿತವಾಗಿರುವ ಕುರಿತು ಪ್ರತಿಕ್ರಿಯಿಸಿದ ಸೋಮಣ್ಣ, ದೇಶದಲ್ಲಿ ಅನೇಕ ಯೋಜನೆಗಳು ನಡೆಯುತ್ತಿವೆ. ಇದರ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವಾಗಿ ಸಮಸ್ಯೆ ಬಗೆಹರಿಸುತ್ತೇನೆ. ಚಾಮರಾಜನಗರ- ಹೆಜ್ಜಾಲ, ಮೈಸೂರು-ಕುಶಾಲನಗರದ ಮಾರ್ಗದ ಕಾಮಗಾರಿ ಮಾಡಲು ಆಗುವುದಿಲ್ಲ ಎಂದು ರಾಜ್ಯ ಸರಕಾರ ತಿಳಿಸಿತ್ತು. ಆದರೆ, ನಾನು ಪತ್ರ ಬರೆದು ಒತ್ತಡ ಹಾಕಿದ್ದೇನೆ. ಶೀಘ್ರದಲ್ಲೇ ಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ, ಎಂದು ತಿಳಿಸಿದರು.
ತುಮಕೂರಿನಲ್ಲಿ ವಿಕಸಿತ ಭಾರತದಡಿ ಗ್ರೀನ್ ಕಾರಿಡಾರ್ ಮಾಡಲಾಗುತ್ತಿದೆ. ಎಲ್ಲಿ ಕಾರ್ಖಾನೆಗಳಿವೆ ಅಲ್ಲಿ ರೈಲ್ವೆ ಹಳಿಗಳನ್ನು ಅಳವಡಿಸಿ ಭದ್ರತೆಗೆ ಒತ್ತು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ರೈಲ್ವೆ ಇಲಾಖೆ ಸಂಬಂಧಿಸಿದಂತೆ ಎಲ್ಲ ಕೆಲಸಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಜೋಡಿಸಿ ಸಹಕಾರ ನೀಡುತ್ತಿದ್ದಾರೆ. ಪ್ರಧಾನಮಂತ್ರಿ ಅವರಿಗೆ ರೈಲ್ವೆ ಇಲಾಖೆ ಬಗ್ಗೆ ದೂರದೃಷ್ಟಿ ಇದ್ದು, 39 ಸಾವಿರ ಕೋಟಿ ರೂ. ವೆಚ್ಚದ 13 ಯೋಜನೆಗಳು ನಡೆಯುತ್ತಿದೆ, ಎಂದು ವಿವರಿಸಿದರು. ಡಿಆರ್ಎಂ ಮುದಿತ್ ಮಿಥಲ್ ಕಾಮಗಾರಿಗಳ ಬಗ್ಗೆ ವಿವರಿಸಿದರು. ವಿಭಾಗಿಯ ಪ್ರಬಂಧಕರು ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.
ನಾಗನಹಳ್ಳಿ ಯಾರ್ಡ್ಗಾಗಿ 8.29 ಎಕರೆ ಜಾಗವನ್ನು ಗುರುತಿಸಲಾಗಿದೆ. ಭೂ ಸ್ವಾಧೀನದ ತೊಡಕು ಉಂಟಾಗಿದ್ದು, ರಾಜ್ಯ ಸರಕಾರಕ್ಕೆ ಪತ್ರ ಬರೆಯಲಾಗಿದೆ. ನಾಗನಹಳ್ಳಿ ಯಾರ್ಡ್ಗಾಗಿ 8.29 ಎಕರೆ ಜಾಗವನ್ನು ಗುರುತಿಸಲಾಗಿದೆ. ಭೂ ಸ್ವಾಧೀನದ ತೊಡಕು ಉಂಟಾಗಿದ್ದು, ರಾಜ್ಯ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಯಾದಗಿರಿ, ರಾಯದುರ್ಗ ಮತ್ತು ತುಮಕೂರು, ದಾವಣಗೆರೆ, ಕುಡಚಿ ಮತ್ತು ಗದಗ ಸೇರಿದಂತೆ ಅನೇಕ ಯೋಜನೆಗಳು ನಡೆಯುತ್ತಿವೆ ಎಂದು ವಿ.ಸೋಮಣ್ಣ, ಕೇಂದ್ರ ಸಚಿವ ಹೇಳಿದ್ದಾರೆ.