
ಚಿತ್ರದುರ್ಗ: ಪುತ್ರಶೋಕಂ ನಿರಂತರಂ ಎಂಬಂತೆ ಮಗನ ಸಾವಿನ ನೋವು ನಿರಂತರವಾಗಿ ಕಾಡುತ್ತಿದೆ ಎಂದು ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ನೋವು ತೋಡಿಕೊಂಡಿದ್ದಾರೆ.

j3tvkannada
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿಗೆ ರೇಣುಕಾಸ್ವಾಮಿ ನಮ್ಮನ್ನಗಲಿ ಒಂದು ವರ್ಷವಾಗಿದೆ. ಹೀಗಾಗಿ ನಾನು, ನನ್ನ ಹೆಂಡತಿ, ಸೊಸೆ ಹಾಗೂ ಮೊಮ್ಮಗ ಎಲ್ಲರೂ ರೇಣುಕಾಸ್ವಾಮಿ ಫೋಟೊಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಿದ್ದೇವೆ. ನಮ್ಮ ಮಗನ ನೋವು ಕಾಡುತ್ತಲೇ ಇದೆ ಎಂದು ಹೇಳಿದರು.
ಇದೇ ವೇಳೆ ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿರುವ ಕುರಿತು ಮಾತನಾಡಿದ ಅವರು, ಅದೆಲ್ಲ ಕಾನೂನು ವಿಚಾರ. ಮಗನ ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು. ಸರ್ಕಾರ, ಕೋರ್ಟ್ ಮೇಲೆ ನಂಬಿಕೆ ಇದ್ದು, ಕ್ರಮ ಆಗುತ್ತದೆ ಎಂದುಕೊಂಡಿದ್ದೇವೆ. ಈವರೆಗೂ ನಟ ದರ್ಶನ್ ನಮ್ಮನ್ನು ಸಂಪರ್ಕಿಸಿಲ್ಲ. ನಾವು ಕೂಡ ಯಾವುದೇ ರೀತಿಯ ರಾಜಿ, ಪಂಚಾಯಿತಿಗೆ ಯತ್ನಿಸಿಲ್ಲ. ಒಂದು ವೇಳೆ ಆ ಸಂದರ್ಭ ಬಂದರೆ ನಮ್ಮ ಸಮಾಜದ ಮುಖಂಡರು ನಿರ್ಧಾರಿಸುತ್ತಾರೆ. ಆದರೆ ನನ್ನ ಮಗನ ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು. ಸೊಸೆ, ಮೊಮ್ಮಗನ ಜೀವನಕ್ಕೆ ಸರ್ಕಾರ ಅನುಕೂಲ ಮಾಡಿಕೊಡಲಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಡಿ-ಗ್ಯಾಂಗ್ನ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದು, ನಟ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯೂಸಿಯಾಗಿದ್ದಾರೆ.