
ಬೀದರ್: ಬೀದರ್ ನಗರದ ಓಲ್ಡ್ ಸಿ.ಟಿ ಹಾಗೂ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಣಣದಲ್ಲಿ ಜೀವಂತ ಮೀನುಗಳನ್ನು ನುಂಗುವುದಕ್ಕಾಗಿ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಮಿರಗ ಮಳೆ ಮತ್ತು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಜೀವಂತ ಮೀನಿನ ಬಾಯಿಯೊಳಗೆ ಆರ್ಯುವೇದ ಔಷಧಿಯನ್ನು ಹಾಕಿ ನುಂಗಿದರೆ ಕೆಮ್ಮು, ಧಮ್ಮು, ಕಾಮಾಲೆ, ಅಸ್ತಮಾದಂತಹ ಖಾಯಿಲೆಗಳು ವಾಸಿಯಾಗುತ್ತದೆ ಎಂಬುವುದು ಜನರ ನಂಬಿಕೆಯಾಗಿದೆ.

j3tvkannada
ಈ ರೀತಿಯಾಗಿ ನೂರಾರು ವರ್ಷದಿಂದ ನಡೆದುಕೊಂಡು ಬರುತ್ತಿದೆ. ವರ್ಷದಲ್ಲಿ ಒಂದು ದಿನ ಮಾತ್ರ ಜೀವಂತ ಮೀನುಗಳನ್ನು ನುಂಗಲಾಗುತ್ತದೆ. ಶತಮಾನದಿಂದ ಇಲ್ಲಿ ಈ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಪ್ರತಿ ವರ್ಷ ಜೂನ್ ತಿಂಗಳು ಆರಂಭದಲ್ಲಿ ಅಂದರೇ ಮಿರುಗು ಮಳೆಯಾದ ತಕ್ಷಣ, ಅಸ್ತಮಾ, ಕೆಮ್ಮು, ಕಾಮಾಲೆ ರೋಗಗಳು ಇದ್ದವರು ಇಲ್ಲಿಗೆ ಬಂದು ಜೀವಂತ ಮೀನುಗಳನ್ನು ನುಂಗಿ ತಮ್ಮ ಕಾಯಿಲೆಗಳನ್ನು ಕಡಿಮೆ ಮಾಡಿಕೊಂಡು ಹೋಗುತ್ತಾರೆ.
ಬೀದರ್ ಜಿಲ್ಲೆ ಹುಮ್ನಾಬಾದ್ ಪಟ್ಟಣದ ಶರಣಪ್ಪ ಜಗದಾಳೆ ಕುಟುಂಬದವರು ಆರ್ಯುವೇದ ಔಷಧಿಯನ್ನು ಜೀವಂತ ಮೀನುಗಳ ಬಾಯಿಯಲ್ಲಿ ಹಾಕುತ್ತಾರೆ. ಬಳಿಕ, ಅಸ್ತಮಾ, ಕಾಮಾಲೆಯಂತ ರೋಗಳಿಂದ ಬಳಲುತ್ತಿರುವ ರೋಗಿಗಳಿಗೆ ನೀಡಿ, ಮೀನು ನುಂಗಿಸಿ ಕಾಯಿಲೆಯನ್ನು ಕಡಿಮೆ ಮಾಡುವ ಕೆಲಸ ಮಾಡುತ್ತಿದ್ದಾರೆ. ವರ್ಷದಲ್ಲಿ ಒಂದು ಸಲ ಮಾತ್ರ ಇವರು ಜನರಿಗೆ ಆರ್ಯುವೇದ ಔಷಧಿಯನ್ನು ಮೀನಿನ ಬಾಯಿಯಲ್ಲಿ ಹಾಕಿ ಜೀವಂತ ಮೀನುಗಳನ್ನು ನುಂಗಿಸುತ್ತಾರೆ. ಹೀಗೇ ಜೀವಂತ ಮೀನುಗಳನ್ನು ನುಂಗಿಸುವುದರಿಂದ ಕೆಮ್ಮ, ದಮ್ಮು, ಕಾಮಾಲೆಯಂತಹ ರೋಗಗಳು ಒಂದೇ ವಾರದಲ್ಲಿ ಕಡಿಮೆಯಾಗತ್ತವೆ ಎಂದು ಜನರು ಕೂಡಾ ನಂಬಿಕೊಂಡಿದ್ದಾರೆ.
ಇಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಮಿನುಗಳನ್ನ ನುಂಗುತ್ತಾರೆ. ಒಂದು ಇಂಚಿನ ಮೀನಿನಿಂದ ಹಿಡಿದು ಮೂರು ನಾಲ್ಕು ಇಂಚಿನ ಜೀವಂತ ಮೀನುಗಳನ್ನು ಗಂಟಲಿಗೆ ಇಟ್ಟುಕೊಂಡು ನುಂಗಿ ನೀರು ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಮನಷ್ಯನ ರೋಗಗಳು ವಾಸಿಯಾಗುತ್ತವೆ ಎಂದು ಆರ್ಯವೇದ ಔಷಧಿ ಕೊಡುವ ಕುಟುಂಬದವರು ಹೇಳಿದ್ದಾರೆ.
ಇಲ್ಲಿನ ಇನ್ನೊಂದು ವಿಶೇಷವೇನೆಂದರೇ 3 ರಿಂದ 4ಇಂಚಿನ ಮೀನುಗಳನ್ನು ನುಂಗಿದರೂ ಯಾರೊಬ್ಬರಿಗೂ ಮೀನು ಗಂಟಲಿಗೆ ಸಿಕ್ಕಿ ಹಾಕೊಂಡ ಉದಾಹರಣೆ ಇಲ್ಲ. ಮಕ್ಕಳು ಕೂಡ ಮೀನುಗಳನ್ನು ನುಂಗಿ ಖುಷಿ ಪಡುತ್ತಾರೆ. ಇನ್ನೂ ಕೆಲ ಮಕ್ಕಳು ಮೀನುಗಳನ್ನು ನೋಡಿ ಹೆದರಿಕೊಂಡು ಚೀರಾಡಿ ಅತ್ತರು ಕೂಡಾ ಪಾಲಕರು ಒತ್ತಾಯ ಪೂರ್ವಕವಾಗಿ ಮಕ್ಕಳಿಗೆ ಮೀನುಗಳನ್ನು ನುಂಗಿಸುತ್ತಾರೆ.
ಮೀನುಗಳನ್ನು ಮಾರಾಟ ಮಾಡುವ ವ್ಯಾಪರಿಗಳಿಗೂ ಕೂಡಾ ಇದು ಸುಗ್ಗಿಯ ಕಾಲ ಅಂತಲೇ ಹೇಳಬಹುದು. ಒಂದು ಚಿಕ್ಕ ಮೀನಿಗೆ ನೂರರಿಂದ ಎರಡು ನೂರು ರೂಪಾಯಿ ಹಣ ಪಡೆದು ಮೀನುಗಳನ್ನು ಮಾರಾಟ ಮಾಡುತ್ತಾರೆ. ಜನರು ಕೂಡ ಖಾಯಿಲೆ ಕಡಿಮೆಯಾಗುತ್ತದೆ ಅನ್ನುವ ಆಸೆಯಿಂದ ಎಷ್ಟೇ ಹಣವಾದರೂ ಕೊಟ್ಟು ಮೀನು ಖರೀದಿಸಿ, ನುಂಗಿ ತಮ್ಮ ಕಾಯಿಲೆ ವಾಸಿಯಾಗುತ್ತೆ ಅಂತ ಅಂದುಕೊಂಡು ಮನೆಗೆ ಹೋಗುತ್ತಿದ್ದಾರೆ. ಇಲ್ಲಿಗೆ ಬಂದ ಜನರು ಕಾಯಿಲೆ ಕಡಿಮೆಯಾಗಿದೆ ಅಂತ ಹೇಳಿದ್ದಾರೆ.