
ಬೀದರ್ :ಮುಂಗಾರು ಮಳೆಯು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಆರೋಗ್ಯದ ಕಡೆಗೆ ಹೆಚ್ಚು ಗಮನ ಕೊಡುವುದು ಅವಶ್ಯಕ ಡೆಂಗ್ಯು, ಮಲೇರಿಯಾ, ಕಾಲರಾಗಳಂತಹ ರೋಗಗಳು ಹರಡುವ ಸಾದ್ಯತೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾವು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದರ ಮೂಲಕ ರೋಗಾಣುಗಳು ಹರಡದಂತೆ ಎಚ್ಚರವಹಿಸುವುದು ಅತ್ಯಂತ ಅವಶ್ಯಕ ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಿದಾಸ ನುಡಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಜರುಗಿತ್ತು .

ಕ್ಷೇತ್ರ ಆರೋಗ್ಯ ನಿರೀಕ್ಷಣಾಧಿಕಾರಿ ಅನೀತಾ ಅವರು ಮಾತನಾಡಿ ವಿದ್ಯಾರ್ಥಿಗಳು ತಾವು ವಾಸಿಸುವ ಪ್ರದೇಶದಲ್ಲಿ ತಮ್ಮ ಮನೆಯ ಮತ್ತು ಸುತ್ತಲಿನ ಪರಿಸರ ಸುವ್ಯವಸ್ಥಿತವಾಗಿ ಇಟ್ಟಿಕೊಳ್ಳುವುದರ ಬಗ್ಗೆ ಅನೇಕರಿಗೆ ಮಾರ್ಗದರ್ಶನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜು ಪ್ರಾಚಾರ್ಯೆ ಅಂಬಿಕಾದೇವಿ ಕೊತಮೀರ್ ಮಾತನಾಡಿ ಆರೋಗ್ಯವೇ ಭಾಗ್ಯ ಎಂಬ ಹೇಳಿಕೆಯನ್ನು ಉಚ್ಚರಿಸುತ್ತಾ, ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯಕರ ವಾತಾವರಣದ ನಿರ್ಮಾಣದಲ್ಲಿ ಪಾತ್ರ ನಿರ್ವಹಣೆ ಅಗತ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ಪದ್ಮಾಂಜಲಿ, ಡಾ.ಅಂಬಿಕಾ, ವಿನಾಯಕ ಕೊತಮೀರ್, ಕ್ಷೇತ್ರ ನಿರೀಕ್ಷಣಾದಿಕಾರಿ ಮೊಹಿಯುದ್ದಿನ್, ಮಹಾಂತೇಶ, ಸಂಗಮೇಶ ರೆಡ್ಡಿ, ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.