
ಬಾಗಲಕೋಟೆ: ಕಬ್ಬಿನ ಬಿಲ್ ಪಾವತಿಸದಿದ್ದಕ್ಕೆ ಜಮಖಂಡಿ ಶುಗರ್ಸ್ ಕಾರ್ಖಾನೆ ವಿರುದ್ಧ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

j3tvkannada
ಜಮಖಂಡಿ ತಾಲೂಕಿನ ನಾಗನೂರು ಗ್ರಾಮದಲ್ಲಿರುವ ಕಾರ್ಖಾನೆ ಬಳಿ ಪ್ರತಿಭಟನೆ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಗೇಟ್ ಬಳಿ ಕಟ್ಟಿಗೆ ಸುಟ್ಟು, ಮಾಲೀಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಪ್ರತಿಭಟನೆಯಲ್ಲಿ ಜಮಖಂಡಿ ಹಾಗೂ ವಿಜಯಪುರ ಭಾಗದ ರೈತರು ಭಾಗಿಯಾಗಿದ್ದು, ಕೂಡಲೇ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ಬಿಲ್ ಪಾವತಿಸದಿದ್ದರೆ ಹೋರಾಟ ಉಗ್ರ ರೂಪ ಪಡೆದುಕೊಳ್ಳಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ.
ಕಾರ್ಖಾನೆ ಅಧ್ಯಕ್ಷರಾಗಿರುವ ಮಾಜಿ ಶಾಸಕ ಆನಂದ್ ನ್ಯಾಮಗೌಡರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಹೋರಾಟ ಹಾದಿ ಹಿಡಿದಿದ್ದೇವೆ ಎಂದು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ರೈತರು ಸಿಟ್ಟು ಹೊರ ಹಾಕಿದ್ದಾರೆ.