
ವಿಜಯನಗರ(ಹಗರಿಬೊಮ್ಮನಹಳ್ಳಿ): ತಾಲೂಕಿನ ಚಿಲುಗೋಡು ಗ್ರಾಮಕ್ಕೆ ಏತ ನೀರಾವರಿ ಯೋಜನೆ ಜಾರಿಗೊಳಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಸೋಮವಾರ ಶಾಸಕ ಕೆ. ನೇಮಿರಾಜ್ ನಾಯ್ಕ್ ಅವರಿಗೆ ಮನವಿ ಸಲ್ಲಿಸಿದರು.

j3tvkannada.in
ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಮನವಿ ಸಲ್ಲಿಸಿ ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಗೋಣಿಬಸಪ್ಪ ಮಾತನಾಡಿ ತುಂಗಭದ್ರಾ ನದಿಯ ಮುಳಗಡೆ ಪ್ರದೇಶದಿಂದ ಪುನರ್ವಸತಿ ಗ್ರಾಮವಾದ ಚಿಲುಗೋಡು ಗ್ರಾಮದಲ್ಲಿ ವ್ಯವಸಾಯ ಮಾಡುತ್ತಿರುವ ರೈತರಿಗೆ ಏತ ನೀರಾವರಿ ಸೌಲಭ್ಯ ಕಲ್ಪಿಸಬೇಕು.
ಈ ಬಗ್ಗೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಯೋಜನೆಯನ್ನು ಜಾರಿಗೆ ತರಲು ವಿಳಂಬ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಏತ ನೀರಾವರಿ ಯೋಜನೆಗೆ ಹೋರಾಟ ಮಾಡಬೇಕಾಗುತ್ತದೆ ಎಂದರು. ಶಾಸಕರು ಮನವಿ ಸ್ವೀಕರಿಸಿ ಮಾತನಾಡಿ ಗ್ರಾಮಕ್ಕೆ ಏತ ನೀರಾವರಿ ಯೋಜನೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದೇವೆ. ಯೋಜನೆ ಜಾರಿಯಾಗುವವರೆಗೂ ನಿಮ್ಮ ಜೊತೆ ನಾನು ಹೋರಾಟ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ರೈತ ಸಂಘದ ಕಿತ್ತನೂರು ನಾಗಪ್ಪ, ಎನ್ ವೀರಣ್ಣ, ಹಲಗೇರಿ ಮಹೇಶ, ಹನುಮರೆಡ್ಡಿ, ಹೊಳಗುಂದಿ ಶಿವರಾಜ್, ಹೊಸಮನಿ ಸಿದ್ದಪ್ಪ ಹಾಗೂ ಇತರರು ಇದ್ದರು.