
ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲೂಕಿನ ಕೃಷ್ಣಾವರಂ ಬಳಿ ಅಪಘಾತ ಸಂಭವಿಸಿದೆ.

j3tvkannada
ಕೃಷ್ಣಾವರಂ ಗ್ರಾಮದ ಆಕಾಶ್ (33), ಜಾನ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಅಪ್ಪು ಅಲಿಯಾಸ್ ಭಾಸ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ತಮಿಳರಸನ್, ನಾಗರಾಜು ಎಂಬವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕೋಲಾರ ಜಿಲ್ಲೆಯಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು ಐವರು ಮೃತಪಟ್ಟಿದ್ದಾರೆ.