
ಬಾಗಲಕೋಟೆ: ಇನ್ನು ಮುಂದೆ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

j3tvkannada
ಇದು ಡಿಜಿಟಲ್ ಯುಗ ಆಗಿರುವ ಕಾರಣ, ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೇ ಕೆಲ ಬದಲಾವಣೆ ಮಾಡಲಿದ್ದೇವೆ. ಒಂದೆರಡು ತಿಂಗಳಲ್ಲಿ ಈ ಬದಲಾವಣೆ ನಿಮಗೆ ಗೊತ್ತಾಗಲಿದೆ ಎಂದರು. ಈಗಾಗಲೇ ಫೇಶಿಯಲ್ ಅಟೆಂಡೆನ್ಸ್ ಬೇರೆ ರಾಜ್ಯದಲ್ಲಿ ಜಾರಿ ಮಾಡಲಾಗಿದೆ. ನಾವು ಸ್ವಲ್ಪ ಹಿಂದೆ ಇದ್ದೇವೆ. ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಇದ್ದ ಕಾರಣ ಒಂದೆರಡು ತಿಂಗಳಿನಲ್ಲಿ ಜಾರಿ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಸರ್ಕಾರಿ ಶಾಲೆಯ 25 ಸಾವಿರ ಮಕ್ಕಳಿಗೆ ಸಿ.ಇ.ಟಿ, ನೀಟ್ ತರಬೇತಿ ಕೊಡುತ್ತಿದ್ದೇವೆ. ಕಳೆದ ಬಾರಿಯಂತೆ ಈ ಬಾರಿಯೂ ಉಚಿತ ತರಬೇತಿಯನ್ನು ವಿಸ್ತರಣೆ ಮಾಡಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾದ ನಂತರ 16,500 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದರು.