
ಕಲಬುರಗಿ: 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳಿಗೆ ರೈತರು ತಮ್ಮ ಹತ್ತಿರದ ಗ್ರಾಮ್ ಒನ್, ಸಿಎಸ್ಸಿ ಕೇಂದ್ರ, ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ. ಬೆಳೆವಾರು ರೈತರು ಪಾವತಿಸಬೇಕಾದ ವಂತಿಕೆ ವಿವರ ಇಂತಿದೆ.
ಹೆಸರು (ಮಳೆಆಶ್ರಿತ) ಪ್ರತಿ ಎಕರೆಗೆ 269.13 ರೂ., ಉದ್ದು (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 265.08, ತೊಗರಿ (ಮಳೆಆಶ್ರಿತ) ಪ್ರತಿ ಎಕರೆಗೆ 388.51 ರೂ., ತೊಗರಿ (ನೀರಾವರಿ) ಪ್ರತಿ ಎಕರೆಗೆ ರೂ. 406.72, ಹತ್ತಿ (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 865.75, ಹತ್ತಿ (ನೀರಾವರಿ) ಪ್ರತಿ ಎಕರೆಗೆ ರೂ. 1492.33 ಹಾಗೂ ಸೂಯಾಅವರೆ (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 331.85 ವಂತಿಕೆ ರೈತರು ಪಾವತಿಸಬೇಕು. ರೈತರು ನೋಂದಣಿ ಮಾಡಿಕೊಳ್ಳಲು 2025ರ ಜುಲೈ 31 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.

j3tvkannada
ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಭರದಿಂದ ಸಾಗಿದ್ದು ಅತೀವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆಯಂತಹ ಪ್ರಕೃತಿ ವಿಕೋಪಗಳು ಹಾಗೂ ಯಾವುದೇ ಹಂತದಲ್ಲಿ ಬೆಳೆ ನಾಶವಾಗಬಹುದು. ಆದ್ದರಿಂದ ರೈತರು ಬಿತ್ತನೆ ಕಾರ್ಯ ಕೈಗೊಳ್ಳುವುದಷ್ಟೇ ಅಲ್ಲದೆ, ಬಿತ್ತಿದ ಬೆಳೆಯ ಕ್ಷೇತ್ರವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ನೊಂದಾಯಿಸುವುದು ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 3 ಮೂರು ವರ್ಷಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ 5,61,082 ಲಕ್ಷ ರೈತರು ಬೆಳೆವಿಮೆ ನೋಂದಣಿ ಮಾಡಿದ್ದು, 59.39 ಕೋಟಿ ರೈತರ ವಂತಿಕೆ ಪಾವತಿ ಮಾಡಿರುತ್ತಾರೆ ಹಾಗೂ 954.61 ಕೋಟಿ ಪರಿಹಾರ ಧನವನ್ನು ರೈತರ ಖಾತೆಗೆ ಪಾವತಿಸಲಾಗಿದೆ. ಕಳೆದ ಮೂರು ವರ್ಷದ ಮಾಹಿತಿ ನೊಡಿದಾಗ ರೈತರಿಗೆ ಬೆಳೆವಿಮೆ ಯೋಜನೆ ಬಹಳ ಅನುಕೂಲಕರವಾಗಿದೆ. ಜಿಲ್ಲೆಯಲ್ಲಿ ಶೇ.90 ರಷ್ಟು ಪ್ರದೇಶ ಮಳೆಯಾಶ್ರಿತವಾಗಿರುವುದರಿಂದ ಅತೀವೃಷ್ಟಿ ಹಾಗೂ ಅನಾವೃಷ್ಟಿಗೆ ಸತತವಾಗಿ ಬೆಳೆಗಳು ತುತ್ತಾಗಿರುತ್ತವೆ. ಆದ್ದರಿಂದ ವಿಮೆ ಮಾಡಿಸಬೇಕು ಎಂದಿದ್ದಾರೆ ಸಮದ್ ಪಟೇಲ್ ಜಂಟಿ ಕೃಷಿ ನಿರ್ದೇಶಕ ಕಲಬುರಗಿ.